Advertisement
ವೆದರ್ ಮಿರರ್

ಹವಾಮಾನ ವರದಿ | 20-09-2025 | ಸೆ.26 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ…? | ಕಾರಣ ಏನು…?

Share

21.09.225ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 25ರ ತನಕ ಮುಂದುವರಿಯಲಿದ್ದು, ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕಾಗಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಬಿಸಿಲು ಹಾಗೂ ಮೋಡದ ವಾತಾವರಣ ಸೆಪ್ಟೆಂಬರ್ 25 ರ ತನಕ ಮುಂದುವರಿಯಲಿದ್ದು, 26 ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 26 ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 28ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಉತ್ತರ ಮಯನ್ಮಾರ್ ಕರಾವಳಿಯಲ್ಲಿ ಸೆಪ್ಟೆಂಬರ್ 25 ರಂದು ಪ್ರಭಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

5 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

5 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

9 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

9 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

10 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

10 hours ago