ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಭೂಮಿ ವಿಪರೀತ ಬಿಸಿಯಾಗಿದೆ. ಜಿಲ್ಲೆಯ ಕೆಲವೆಡೆ ಸಂಜೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ, ಮಧ್ಯಾಹ್ನದ ಹೊತ್ತಿಗೆ ಬಹುತೇಕ ಕಡೆ ತಾಪಮಾನ 38-40 ಡಿಗ್ರಿಗೆ ಏರಿಕೆಯಾಗಿದೆ. ಜನತೆ ಮಳೆಗಾಗಿ ಪರಿತಪಿಸುತ್ತಿದ್ದಾರೆ.
ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ. ಏ.18ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದ್ದು ಉತ್ತರ ಕರ್ನಾಟಕ ಪ್ರದೇಶಗಳಾದ ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಏ.15ರಿಂದ 18ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…