ಸುದ್ದಿಗಳು

ಐಟಿಐ ವಿದ್ಯಾರ್ಥಿಗಳ ಸಂಕಷ್ಟ | ಪಾಠ ಓದಿದ್ದು ಒಂದು -ಪರೀಕ್ಷೆಗೆ ಬಂದದ್ದು ಇನ್ನೊಂದು | ವಿದ್ಯಾರ್ಥಿಗಳ ಸಂಕಷ್ಟಕ್ಕೆ ಪರಿಹಾರ ಬೇಕಿದೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವರ್ಷವಿಡೀ ಓದಿದ ಬಳಿಕ ಪರೀಕ್ಷೆ ನಡೆದಾಗ ಐಟಿಐ ವಿಭಾಗದ ಇಲೆಕ್ಟ್ರಾನಿಕ್ಸ್‌ ವಿಭಾಗದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ.

Advertisement
Advertisement

ಇಲೆಕ್ಟ್ರಾನಿಕ್ಸ್‌ ವಿಭಾಗದ ವಿದ್ಯಾರ್ಥಿಗಳಿಗೆ ಇಲೆಕ್ಟ್ರಿಕಲ್‌ ವಿಭಾಗದ ಪ್ರಶ್ನೆಗಳು ಪರೀಕ್ಷೆಯಲ್ಲಿ ಬರೆಯಲು ಬಂದಿತ್ತು. ಪರೀಕ್ಷೆ ಮುಗಿದ ಬಳಿಕ ಈ ಎಡವಟ್ಟು ತಿಳಿದಿತ್ತು. ಕೊನೆಗೆ ಈ ಪರೀಕ್ಷೆಗೆ ಗ್ರೇಸ್‌ ಅಂಕ ನೀಡಲಾಗುವುದು  ಎಂದು ಭರವಸೆ ಸಿಕ್ಕಿದ ಬಳಿಕ ವಿದ್ಯಾರ್ಥಿಗಳು ಸಮಾಧಾನಗೊಂಡಿದ್ದರು. ಇದೀಗ ಫಲಿತಾಂಶ ಬಂದಾಗ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ತಮ್ಮದಲ್ಲದ ತಪ್ಪಿಗೆ ಯಾರು ಹೊಣೆ ಎನ್ನುವುದು  ಈಗ ಪ್ರಶ್ನೆಯಾಗಿದೆ. ಐಟಿಐ ವಿಭಾಗದವು ರಾಜ್ಯಮಟ್ಟ ಮಾತ್ರವಲ್ಲ ರಾಷ್ಟ್ರಮಟ್ಟದ ವ್ಯವಸ್ಥೆ. ಕೇಂದ್ರ ಸರಕಾರದ ಕೌಶಲ್ಯಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗ ವಿದ್ಯಾರ್ಥಿ ಸಂಘಟನೆಗಳು ಈ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಲ್ಲಬೇಕಾಗಿದೆ.

ಅಂತಿಮ ವರ್ಷದ ಐಟಿಐ ಪರೀಕ್ಷೆಯಲ್ಲಿ ಎಲೆಕ್ಟಿಕಲ್ ವಿಭಾಗದ ಐದು ಪ್ರಶ್ನೆಗಳನ್ನು ಇಲೆಕ್ಟ್ರಾನಿಕ್ಸ್ ಡ್ರಾಯಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಪರೀಕ್ಷಾ ವಿಭಾಗದವರ ಎಡವಟ್ಟು ಮಕ್ಕಳಿಗೆ ಗೊತ್ತಾದ  ತಕ್ಷಣವೇ ಆಗಲೇ ಪರೀಕ್ಷಾ ಸಿಬ್ಬಂದಿಯವರಿಗೆ ಕೇಳಿದರೂ, ಪರವಾಗಿಲ್ಲ ನಿಮಗೆ ಗೊತ್ತಿರೋದನ್ನ ಬರೆಯಿರಿ , ಗ್ರೇಸ್ ಮಾರ್ಕ್ಸ್ ಕೊಡ್ತಾರೆ ಅಂತ ಹೇಳಿದ್ದಾರೆ. ಒಟ್ಟು 50 ಅಂಕದ ಪ್ರಶ್ನೆ ಪತ್ರಿಕೆಯಲ್ಲಿ 40 ಅಂಕದ ಪ್ರಶ್ನೆಗಳು ಬೇರೆ ವಿಭಾಗದ ಪ್ರಶ್ನೆಗಳಾಗಿದ್ದು, ಗ್ರೇಸ್ ಮಾರ್ಕ್ಸ್ ಸಿಗುತ್ತೆ ಅಂತ ಮಕ್ಕಳು ಪರೀಕ್ಷೆ ಬರೆದು ತೆರಳಿದ್ದಾರೆ. ಆದರೆ  ಫಲಿತಾಂಶ ಬಂದಾಗ ಅದೊಂದೇ ವಿಷಯದಲ್ಲಿ ಬಹುಪಾಲು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ಇಲಾಖೆಗಳ ಈ ಎಡವಟ್ಟಿನಿಂದ ಮಕ್ಕಳ ಭವಿಷ್ಯ ಹಾಳಾಗಿದ್ದು, ಸಂಬಂಧಿಸಿದವರು ಕೂಡಲೇ ಕ್ರಮ ತೆಗೆದುಕೊಳ್ಳಲು ಪೋಷಕರು ಆಗ್ರಹಿಸಿದ್ದಾರೆ.

ಈಗ ಐಟಿಐ ವಿದ್ಯಾರ್ಥಿಗಳ ಪರೀಕ್ಷಾ ಪದ್ದತಿಯೂ ಬದಲಾಗಿದೆ. ಹಿಂದಿನಂತೆ ಪರೀಕ್ಷೆ ಬರೆಯುವ ಬದಲು ಉನ್ನತ ವ್ಯಾಸಾಂಗದ ಮಾದರಿಯಂತೆ ಆನ್‌ ಲೈನ್‌ ಮಾಕ್‌ ಟೆಸ್ಟ್‌ ಇರುತ್ತದೆ. ಇದೂ ಒಂದು ಸಮಸ್ಯೆ ವಿದ್ಯಾರ್ಥಿಗಳಿಗೆ ಕಾಡುತ್ತದೆ. ಇದೀಗ ಡ್ರಾಯಿಂಗ್ ವಿಭಾಗವೂ ಸಂಕಷ್ಟವಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದೆ. ತಕ್ಷಣವೇ ಇಲಾಖೆಗಳು ಗಮನಹರಿಸಬೇಕಿದೆ.

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

9 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

13 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

13 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

19 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

21 hours ago