ಪುತ್ತೂರಿನ ನವತೇಜ ಮತ್ತು ಜೇಸಿ ಸಂಸ್ಥೆಗಳು ಜಂಟಿಯಾಗಿ 2022 ಜೂನ್ 25 ಮತ್ತು 26 ರಂದು ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಸುಕೃತೀಂದ್ರ ಸಭಾಭವನದಲ್ಲಿ ದಿನಪೂರ್ತಿ ‘ಹಲಸು ಮೇಳ’ವನ್ನು ಸಂಘಟಿಸಿದೆ. ಈ ಮೇಳದಲ್ಲಿ ಹಲಸು ಮಾತ್ರವಲ್ಲದೆ ಇತರ ಹಣ್ಣುಗಳ ಪ್ರದರ್ಶನಗಳಿವೆ ಎಂದು ನವತೇಜ ಟ್ರಸ್ಟ್ನ ಪ್ರಮುಖರಾದ ಸುಹಾಸ್ ಮರಿಕೆ, ಅನಂತ ಪ್ರಸಾದ್ ನೈತ್ತಡ್ಕ ಹಾಗೂ ಜೇಸೀ ಶಶಿರಾಜ್ ತಿಳಿಸಿದ್ದಾರೆ.
ಹಲಸಿನ ವಿವಿಧ ಖಾದ್ಯಗಳ ಲೈವ್ ಮೇಳದ ಆಕರ್ಷಣೆ. ತಿಪಟೂರಿನ ಪ್ರಸಿದ್ಧ ಕೆಂಪು ಹಲಸು ಮೇಳಕ್ಕೆ ಬರಲಿದೆ. ಹಲಸಿನ ತಳಿಗಳ ವೈವಿಧ್ಯಗಳಿವೆ. ಮೌಲ್ಯವರ್ಧನೆ ಮಾಡಿದವರ ಯಶೋಗಾಥೆಗಳಿವೆ. ಹಲಸಿನ ತೋಟ ಎಬ್ಬಿಸಿದವರ ಕಷ್ಟ-ಸುಖಗಳ ನಿರೂಪಗಳಿವೆ. ಈಗಾಗಲೇ ಈ ಕ್ಷೇತ್ರದಲ್ಲಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದವರ ಮಳಿಗೆಗಳಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel