Advertisement
ಸುದ್ದಿಗಳು

ಜೂನ್ 17, 18 | ಪುತ್ತೂರು ಜೈನ ಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ

Share
ನವತೇಜ ಟ್ರಸ್ಟ್ ಪುತ್ತೂರು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, (ಐ.ಐ.ಹೆಚ್.ಆರ್.) ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಹಲಸು ಮತ್ತು ಹಣ್ಣುಗಳ ಮೇಳ’ವು 2023 ಜೂನ್ 17 ಶನಿವಾರ ಮತ್ತು 18 ಭಾನುವಾರದಂದು ಜರುಗಲಿದೆ. ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ‘ಜೈನ್ ಭವನ’ದಲ್ಲಿ ದಿನಪೂರ್ತಿ ನಡೆಯುವ ಹಲಸು ಮೇಳದಲ್ಲಿ ಹೊಟ್ಟೆ ತಂಪಾಗಿಸುವ, ಮೆದುಳಿಗೆ ಮೇವನ್ನು ನೀಡುವ ವೈವಿಧ್ಯತೆಗಳಿವೆ ನವತೇಜ ಸಂಸ್ಥೆಯ ಸುಹಾಸ್‌ ಮರಿಕೆ ತಿಳಿಸಿದ್ದಾರೆ.
ಸುಮಾರು ಮೂವತ್ತಕ್ಕೂ ಮಿಕ್ಕಿ ಮಳಿಗೆಗಳಲ್ಲಿ ತಾಜಾ ಹಲಸಿನ ಉತ್ಪನ್ನಗಳ ಮಾರಾಟವಿದೆ. ಯಾವುದೇ ಕೃತಕ ಬಣ್ಣ, ಒಳಸುರಿಗಳನ್ನು ಬಳಸದ ಉತ್ಪನ್ನಗಳು ಮೇಳದ ಹೈಲೈಟ್. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ ತಿಂಡಿಗಳು ಗ್ರಾಹಕರಲ್ಲಿ ರುಚಿವರ್ಧನೆಯನ್ನು ಮಾಡಲಿವೆ. ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳಿಂದ ಗಿಡಗಳ ಪ್ರದರ್ಶನ ಮತ್ತು ಮಾರಾಟವಿದೆ.
ಹಲಸಿನ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‍ಕ್ರೀಂ.. ಹೀಗೆ ಹತ್ತಾರು ಬಗೆಯನ್ನು ಸವಿಯಲು ಅವಕಾಶ. ಹಲಸಿನ ಹಣ್ಣಿನ ಮಳಿಗೆಯಿದೆ. ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಖಾದ್ಯಗಳಲ್ಲಿ ಹೈಲೈಟ್. ಹಲಸಿನ ಇಷ್ಟೊಂದು ಖಾದ್ಯಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗುತ್ತಿರುವುದು ಹಲಸು ಪ್ರಿಯರಿಗೆ ಖುಷಿ ತರಬಹುದಾದ ವಿಚಾರ.
ಬೆಂಗಳೂರಿನ ಐಐಹೆಚ್‍ಆರ್ ಸಂಸ್ಥೆಯು ಹಲಸಿನ ಉತ್ಕೃಷ್ಟ ತಳಿಗಳನ್ನು ಪ್ರದರ್ಶನ ಮಾಡಲಿದೆ. ಇದರ ವಿಜ್ಞಾನಿಗಳು ಹಲಸು ಕೃಷಿಯ ಮತ್ತು ಮಾರಾಟದ ಕುರಿತಾದ ಕೃಷಿಕ ಕೌಶಲ್ಯ ತರಬೇತಿಯನ್ನು ನೀಡಲಿದ್ದಾರೆ. ಕೃಷಿಕರು ತಮ್ಮಲ್ಲಿದ್ದ ವಿವಿಧ ರುಚಿಯ ಹಲಸಿನ ಹಣ್ಣುಗಳನ್ನು ತಂದು ಪ್ರದರ್ಶನ ಮತ್ತು ಮಾರಾಟಕ್ಕಿಡುವ ವ್ಯವಸ್ಥೆಯಿದೆ. ಹಲಸು ಅಲ್ಲದೆ ವಿವಿಧ ಹಣ್ಣುಗಳು, ಕಾಡುಹಣ್ಣುಗಳನ್ನು ಕೂಡಾ ಮಾರಾಟಕ್ಕಿಡಬಹುದಾಗಿದೆ.
ಈ ಋತುವಿನಲ್ಲಿ ಸಿಗುವ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ, ವಿಶೇಷ ಆಹಾರ ಮಳಿಗೆ, ಅಗ್ರಿ ಬ್ಯುಸಿನೆಸ್ ಮಳಿಗೆಗಳು, ಹಲಸು ಕೃಷಿಕರ ಅನುಭವದ ಮಾತುಗಳು, ಹೊಸ ಹೊಸ ತಳಿಗಳ ಪರಿಚಯ.. ಹೀಗೆ ಹಲಸು ಮೇಳದಲ್ಲಿ ವಿವಿಧ ವೈವಿಧ್ಯಗಳು.
ವಿದ್ಯಾರ್ಥಿಗಳಿಗೆ ಹಲಸಿನ ಅರಿವನ್ನು ಮೂಡಿಸುವ ಉದ್ದೇಶದಿಂದ ಚಿತ್ರಬಿಡಿಸುವ, ಕವನ ರಚಿಸುವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಲಸಿನ ಹಣ್ಣಿನ ಸೊಳೆಯನ್ನು ತಿನ್ನುವ ಸ್ಪರ್ಧೆಯಿದೆ. ಹಲಸು ಪ್ರಿಯರಿಗೆ ಈ ಎಲ್ಲಾ ಕಾರ್ಯಕ್ರಮಗಳಿಗೆ ಮುಕ್ತ ಪ್ರವೇಶ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಸಕರು, ವಿವಿಧ ರಂಗದ ಗಣ್ಯರು, ಕೃಷಿಕರು ಆಗಮಿಸಲಿದ್ದಾರೆ. ನವತೇಜ ಟ್ರಸ್ಟಿನೊಂದಿಗೆ ಅಕ್ಷ ಕಾಟೇಜ್ ಇಂಡಸ್ಟ್ರೀಸ್, ನವನೀತ್ ಫಾರ್ಮ್ ನರ್ಸರಿ, ಮರಿಕೆ ಸಾವಯವ ಮಳಿಗೆ ಇವರ ಹೆಗಲೆಣೆ. ಎಲ್ಲರಿಗೂ ಮುಕ್ತ ಪ್ರವೇಶ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

16 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago