ಪುತ್ತೂರು | ಜೂನ್ 25, 26 ರಂದು ಹಲಸು ಮೇಳ

June 19, 2022
11:15 AM

ಪುತ್ತೂರಿನ ನವತೇಜ ಮತ್ತು ಜೇಸಿ ಸಂಸ್ಥೆಗಳು ಜಂಟಿಯಾಗಿ 2022 ಜೂನ್ 25 ಮತ್ತು 26 ರಂದು ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಸುಕೃತೀಂದ್ರ ಸಭಾಭವನದಲ್ಲಿ ದಿನಪೂರ್ತಿ ‘ಹಲಸು ಮೇಳ’ವನ್ನು ಸಂಘಟಿಸಿದೆ. ಈ ಮೇಳದಲ್ಲಿ ಹಲಸು ಮಾತ್ರವಲ್ಲದೆ ಇತರ ಹಣ್ಣುಗಳ ಪ್ರದರ್ಶನಗಳಿವೆ ಎಂದು ನವತೇಜ ಟ್ರಸ್ಟ್‌ನ ಪ್ರಮುಖರಾದ ಸುಹಾಸ್ ಮರಿಕೆ, ಅನಂತ ಪ್ರಸಾದ್ ನೈತ್ತಡ್ಕ ಹಾಗೂ ಜೇಸೀ ಶಶಿರಾಜ್ ತಿಳಿಸಿದ್ದಾರೆ.

Advertisement
Advertisement
Advertisement

ಹಲಸಿನ ವಿವಿಧ ಖಾದ್ಯಗಳ ಲೈವ್ ಮೇಳದ ಆಕರ್ಷಣೆ. ತಿಪಟೂರಿನ ಪ್ರಸಿದ್ಧ ಕೆಂಪು ಹಲಸು ಮೇಳಕ್ಕೆ ಬರಲಿದೆ. ಹಲಸಿನ ತಳಿಗಳ ವೈವಿಧ್ಯಗಳಿವೆ. ಮೌಲ್ಯವರ್ಧನೆ ಮಾಡಿದವರ ಯಶೋಗಾಥೆಗಳಿವೆ. ಹಲಸಿನ ತೋಟ ಎಬ್ಬಿಸಿದವರ ಕಷ್ಟ-ಸುಖಗಳ ನಿರೂಪಗಳಿವೆ. ಈಗಾಗಲೇ ಈ ಕ್ಷೇತ್ರದಲ್ಲಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದವರ ಮಳಿಗೆಗಳಿವೆ.

Advertisement
ಹಲಸಿನ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‍ಕ್ರೀಂ.. ಹೀಗೆ ಹತ್ತಾರು ಬಗೆಯನ್ನು ಸವಿಯಲು ಅವಕಾಶ. ಹಲಸಿನ ಹಣ್ಣಿನ ಮಳಿಗೆಯಿದೆ. ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಖಾದ್ಯಗಳಲ್ಲಿ ಹೈಲೈಟ್. ಹಲಸಿನ ಇಷ್ಟೊಂದು ಖಾದ್ಯಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗುತ್ತಿರುವುದು ಹಲಸು ಪ್ರಿಯರಿಗೆ ಖುಷಿ ನೀಡಿದೆ. ಈ ಹಿಂದೆ ಈ ಸಂಸ್ಥೆಗಳ ಆಶ್ರಯದಲ್ಲಿ ಸಾವಯವ ಮೇಳ, ಹಲಸಿನ ಮೇಳಗಳು ತುಂಬು ಯಶಸ್ವಿಯಾಗಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗೆ ಸುಹಾಸ್ ಮರಿಕೆ (94805 35708) ಸಂಪರ್ಕಿಸಬಹುದು.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror