Advertisement
ಸುದ್ದಿಗಳು

ಪುತ್ತೂರು | ಜೂನ್ 25, 26 ರಂದು ಹಲಸು ಮೇಳ

Share

ಪುತ್ತೂರಿನ ನವತೇಜ ಮತ್ತು ಜೇಸಿ ಸಂಸ್ಥೆಗಳು ಜಂಟಿಯಾಗಿ 2022 ಜೂನ್ 25 ಮತ್ತು 26 ರಂದು ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಸುಕೃತೀಂದ್ರ ಸಭಾಭವನದಲ್ಲಿ ದಿನಪೂರ್ತಿ ‘ಹಲಸು ಮೇಳ’ವನ್ನು ಸಂಘಟಿಸಿದೆ. ಈ ಮೇಳದಲ್ಲಿ ಹಲಸು ಮಾತ್ರವಲ್ಲದೆ ಇತರ ಹಣ್ಣುಗಳ ಪ್ರದರ್ಶನಗಳಿವೆ ಎಂದು ನವತೇಜ ಟ್ರಸ್ಟ್‌ನ ಪ್ರಮುಖರಾದ ಸುಹಾಸ್ ಮರಿಕೆ, ಅನಂತ ಪ್ರಸಾದ್ ನೈತ್ತಡ್ಕ ಹಾಗೂ ಜೇಸೀ ಶಶಿರಾಜ್ ತಿಳಿಸಿದ್ದಾರೆ.

ಹಲಸಿನ ವಿವಿಧ ಖಾದ್ಯಗಳ ಲೈವ್ ಮೇಳದ ಆಕರ್ಷಣೆ. ತಿಪಟೂರಿನ ಪ್ರಸಿದ್ಧ ಕೆಂಪು ಹಲಸು ಮೇಳಕ್ಕೆ ಬರಲಿದೆ. ಹಲಸಿನ ತಳಿಗಳ ವೈವಿಧ್ಯಗಳಿವೆ. ಮೌಲ್ಯವರ್ಧನೆ ಮಾಡಿದವರ ಯಶೋಗಾಥೆಗಳಿವೆ. ಹಲಸಿನ ತೋಟ ಎಬ್ಬಿಸಿದವರ ಕಷ್ಟ-ಸುಖಗಳ ನಿರೂಪಗಳಿವೆ. ಈಗಾಗಲೇ ಈ ಕ್ಷೇತ್ರದಲ್ಲಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದವರ ಮಳಿಗೆಗಳಿವೆ.

ಹಲಸಿನ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‍ಕ್ರೀಂ.. ಹೀಗೆ ಹತ್ತಾರು ಬಗೆಯನ್ನು ಸವಿಯಲು ಅವಕಾಶ. ಹಲಸಿನ ಹಣ್ಣಿನ ಮಳಿಗೆಯಿದೆ. ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಖಾದ್ಯಗಳಲ್ಲಿ ಹೈಲೈಟ್. ಹಲಸಿನ ಇಷ್ಟೊಂದು ಖಾದ್ಯಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗುತ್ತಿರುವುದು ಹಲಸು ಪ್ರಿಯರಿಗೆ ಖುಷಿ ನೀಡಿದೆ. ಈ ಹಿಂದೆ ಈ ಸಂಸ್ಥೆಗಳ ಆಶ್ರಯದಲ್ಲಿ ಸಾವಯವ ಮೇಳ, ಹಲಸಿನ ಮೇಳಗಳು ತುಂಬು ಯಶಸ್ವಿಯಾಗಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗೆ ಸುಹಾಸ್ ಮರಿಕೆ (94805 35708) ಸಂಪರ್ಕಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

19 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago