Advertisement
ಸುದ್ದಿಗಳು

ಪುತ್ತೂರು | ಜೂನ್ 25, 26 ರಂದು ಹಲಸು ಮೇಳ

Share

ಪುತ್ತೂರಿನ ನವತೇಜ ಮತ್ತು ಜೇಸಿ ಸಂಸ್ಥೆಗಳು ಜಂಟಿಯಾಗಿ 2022 ಜೂನ್ 25 ಮತ್ತು 26 ರಂದು ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಸುಕೃತೀಂದ್ರ ಸಭಾಭವನದಲ್ಲಿ ದಿನಪೂರ್ತಿ ‘ಹಲಸು ಮೇಳ’ವನ್ನು ಸಂಘಟಿಸಿದೆ. ಈ ಮೇಳದಲ್ಲಿ ಹಲಸು ಮಾತ್ರವಲ್ಲದೆ ಇತರ ಹಣ್ಣುಗಳ ಪ್ರದರ್ಶನಗಳಿವೆ ಎಂದು ನವತೇಜ ಟ್ರಸ್ಟ್‌ನ ಪ್ರಮುಖರಾದ ಸುಹಾಸ್ ಮರಿಕೆ, ಅನಂತ ಪ್ರಸಾದ್ ನೈತ್ತಡ್ಕ ಹಾಗೂ ಜೇಸೀ ಶಶಿರಾಜ್ ತಿಳಿಸಿದ್ದಾರೆ.

ಹಲಸಿನ ವಿವಿಧ ಖಾದ್ಯಗಳ ಲೈವ್ ಮೇಳದ ಆಕರ್ಷಣೆ. ತಿಪಟೂರಿನ ಪ್ರಸಿದ್ಧ ಕೆಂಪು ಹಲಸು ಮೇಳಕ್ಕೆ ಬರಲಿದೆ. ಹಲಸಿನ ತಳಿಗಳ ವೈವಿಧ್ಯಗಳಿವೆ. ಮೌಲ್ಯವರ್ಧನೆ ಮಾಡಿದವರ ಯಶೋಗಾಥೆಗಳಿವೆ. ಹಲಸಿನ ತೋಟ ಎಬ್ಬಿಸಿದವರ ಕಷ್ಟ-ಸುಖಗಳ ನಿರೂಪಗಳಿವೆ. ಈಗಾಗಲೇ ಈ ಕ್ಷೇತ್ರದಲ್ಲಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದವರ ಮಳಿಗೆಗಳಿವೆ.

ಹಲಸಿನ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‍ಕ್ರೀಂ.. ಹೀಗೆ ಹತ್ತಾರು ಬಗೆಯನ್ನು ಸವಿಯಲು ಅವಕಾಶ. ಹಲಸಿನ ಹಣ್ಣಿನ ಮಳಿಗೆಯಿದೆ. ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಖಾದ್ಯಗಳಲ್ಲಿ ಹೈಲೈಟ್. ಹಲಸಿನ ಇಷ್ಟೊಂದು ಖಾದ್ಯಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗುತ್ತಿರುವುದು ಹಲಸು ಪ್ರಿಯರಿಗೆ ಖುಷಿ ನೀಡಿದೆ. ಈ ಹಿಂದೆ ಈ ಸಂಸ್ಥೆಗಳ ಆಶ್ರಯದಲ್ಲಿ ಸಾವಯವ ಮೇಳ, ಹಲಸಿನ ಮೇಳಗಳು ತುಂಬು ಯಶಸ್ವಿಯಾಗಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗೆ ಸುಹಾಸ್ ಮರಿಕೆ (94805 35708) ಸಂಪರ್ಕಿಸಬಹುದು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

5 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

10 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

17 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago