Advertisement
ಸುದ್ದಿಗಳು

ಪುತ್ತೂರು | ಜೂನ್ 25, 26 ರಂದು ಹಲಸು ಮೇಳ

Share

ಪುತ್ತೂರಿನ ನವತೇಜ ಮತ್ತು ಜೇಸಿ ಸಂಸ್ಥೆಗಳು ಜಂಟಿಯಾಗಿ 2022 ಜೂನ್ 25 ಮತ್ತು 26 ರಂದು ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಸುಕೃತೀಂದ್ರ ಸಭಾಭವನದಲ್ಲಿ ದಿನಪೂರ್ತಿ ‘ಹಲಸು ಮೇಳ’ವನ್ನು ಸಂಘಟಿಸಿದೆ. ಈ ಮೇಳದಲ್ಲಿ ಹಲಸು ಮಾತ್ರವಲ್ಲದೆ ಇತರ ಹಣ್ಣುಗಳ ಪ್ರದರ್ಶನಗಳಿವೆ ಎಂದು ನವತೇಜ ಟ್ರಸ್ಟ್‌ನ ಪ್ರಮುಖರಾದ ಸುಹಾಸ್ ಮರಿಕೆ, ಅನಂತ ಪ್ರಸಾದ್ ನೈತ್ತಡ್ಕ ಹಾಗೂ ಜೇಸೀ ಶಶಿರಾಜ್ ತಿಳಿಸಿದ್ದಾರೆ.

ಹಲಸಿನ ವಿವಿಧ ಖಾದ್ಯಗಳ ಲೈವ್ ಮೇಳದ ಆಕರ್ಷಣೆ. ತಿಪಟೂರಿನ ಪ್ರಸಿದ್ಧ ಕೆಂಪು ಹಲಸು ಮೇಳಕ್ಕೆ ಬರಲಿದೆ. ಹಲಸಿನ ತಳಿಗಳ ವೈವಿಧ್ಯಗಳಿವೆ. ಮೌಲ್ಯವರ್ಧನೆ ಮಾಡಿದವರ ಯಶೋಗಾಥೆಗಳಿವೆ. ಹಲಸಿನ ತೋಟ ಎಬ್ಬಿಸಿದವರ ಕಷ್ಟ-ಸುಖಗಳ ನಿರೂಪಗಳಿವೆ. ಈಗಾಗಲೇ ಈ ಕ್ಷೇತ್ರದಲ್ಲಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದವರ ಮಳಿಗೆಗಳಿವೆ.

ಹಲಸಿನ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‍ಕ್ರೀಂ.. ಹೀಗೆ ಹತ್ತಾರು ಬಗೆಯನ್ನು ಸವಿಯಲು ಅವಕಾಶ. ಹಲಸಿನ ಹಣ್ಣಿನ ಮಳಿಗೆಯಿದೆ. ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಖಾದ್ಯಗಳಲ್ಲಿ ಹೈಲೈಟ್. ಹಲಸಿನ ಇಷ್ಟೊಂದು ಖಾದ್ಯಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗುತ್ತಿರುವುದು ಹಲಸು ಪ್ರಿಯರಿಗೆ ಖುಷಿ ನೀಡಿದೆ. ಈ ಹಿಂದೆ ಈ ಸಂಸ್ಥೆಗಳ ಆಶ್ರಯದಲ್ಲಿ ಸಾವಯವ ಮೇಳ, ಹಲಸಿನ ಮೇಳಗಳು ತುಂಬು ಯಶಸ್ವಿಯಾಗಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗೆ ಸುಹಾಸ್ ಮರಿಕೆ (94805 35708) ಸಂಪರ್ಕಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

12 minutes ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

7 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

7 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

8 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

18 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

18 hours ago