Advertisement
ಸುದ್ದಿಗಳು

ಪುತ್ತೂರು | ಜೂನ್ 25, 26 ರಂದು ಹಲಸು ಮೇಳ

Share

ಪುತ್ತೂರಿನ ನವತೇಜ ಮತ್ತು ಜೇಸಿ ಸಂಸ್ಥೆಗಳು ಜಂಟಿಯಾಗಿ 2022 ಜೂನ್ 25 ಮತ್ತು 26 ರಂದು ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಸುಕೃತೀಂದ್ರ ಸಭಾಭವನದಲ್ಲಿ ದಿನಪೂರ್ತಿ ‘ಹಲಸು ಮೇಳ’ವನ್ನು ಸಂಘಟಿಸಿದೆ. ಈ ಮೇಳದಲ್ಲಿ ಹಲಸು ಮಾತ್ರವಲ್ಲದೆ ಇತರ ಹಣ್ಣುಗಳ ಪ್ರದರ್ಶನಗಳಿವೆ ಎಂದು ನವತೇಜ ಟ್ರಸ್ಟ್‌ನ ಪ್ರಮುಖರಾದ ಸುಹಾಸ್ ಮರಿಕೆ, ಅನಂತ ಪ್ರಸಾದ್ ನೈತ್ತಡ್ಕ ಹಾಗೂ ಜೇಸೀ ಶಶಿರಾಜ್ ತಿಳಿಸಿದ್ದಾರೆ.

ಹಲಸಿನ ವಿವಿಧ ಖಾದ್ಯಗಳ ಲೈವ್ ಮೇಳದ ಆಕರ್ಷಣೆ. ತಿಪಟೂರಿನ ಪ್ರಸಿದ್ಧ ಕೆಂಪು ಹಲಸು ಮೇಳಕ್ಕೆ ಬರಲಿದೆ. ಹಲಸಿನ ತಳಿಗಳ ವೈವಿಧ್ಯಗಳಿವೆ. ಮೌಲ್ಯವರ್ಧನೆ ಮಾಡಿದವರ ಯಶೋಗಾಥೆಗಳಿವೆ. ಹಲಸಿನ ತೋಟ ಎಬ್ಬಿಸಿದವರ ಕಷ್ಟ-ಸುಖಗಳ ನಿರೂಪಗಳಿವೆ. ಈಗಾಗಲೇ ಈ ಕ್ಷೇತ್ರದಲ್ಲಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದವರ ಮಳಿಗೆಗಳಿವೆ.

ಹಲಸಿನ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‍ಕ್ರೀಂ.. ಹೀಗೆ ಹತ್ತಾರು ಬಗೆಯನ್ನು ಸವಿಯಲು ಅವಕಾಶ. ಹಲಸಿನ ಹಣ್ಣಿನ ಮಳಿಗೆಯಿದೆ. ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಖಾದ್ಯಗಳಲ್ಲಿ ಹೈಲೈಟ್. ಹಲಸಿನ ಇಷ್ಟೊಂದು ಖಾದ್ಯಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗುತ್ತಿರುವುದು ಹಲಸು ಪ್ರಿಯರಿಗೆ ಖುಷಿ ನೀಡಿದೆ. ಈ ಹಿಂದೆ ಈ ಸಂಸ್ಥೆಗಳ ಆಶ್ರಯದಲ್ಲಿ ಸಾವಯವ ಮೇಳ, ಹಲಸಿನ ಮೇಳಗಳು ತುಂಬು ಯಶಸ್ವಿಯಾಗಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗೆ ಸುಹಾಸ್ ಮರಿಕೆ (94805 35708) ಸಂಪರ್ಕಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

13 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

13 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

24 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago