Advertisement
MIRROR FOCUS

ಕರಾವಳಿಯಲ್ಲೂ ಹಲಸಿಗೆ ಬರುತ್ತಿದೆ ಮಾನ | 10 ಸಾವಿರ ಕೆಜಿ ಹಲಸಿನ ಹಣ್ಣು ಮಾರಾಟ | ರೈತರಿಂದ ಗ್ರಾಹಕರಿಗೆ ನೇರ ವ್ಯವಸ್ಥೆ ಮಾಡಿದ ಬಂಟ್ವಾಳದ ಹಲಸಿನಂಗಡಿ |

Share

ಹಲಸು ಇನ್ನು ಕೃಷಿಕರಲ್ಲಿ ಎಸೆಯುವ ವಸ್ತುವಲ್ಲ. ಅದಕ್ಕೂ ಮಾನ-ಸಮ್ಮಾನಗಳು ಬಂದಿವೆ. ಬಂಟ್ವಾಳದ ಪೊನೋಸ್ ಹಲಸಿನಂಗಡಿಯಲ್ಲಿ  ಹಲಸು ಪ್ರೇಮಿ ಕೂಟದ ಮೌನೀಶ್‌ ಮಲ್ಯರು  ಈ ಬಾರು 10 ಸಾವಿರ ಕೆಜಿ ಹಲಸು  ಮಾರಾಟ ಮಾಡಿದ್ದಾರೆ. ಈ ಮೂಲಕ ಕೃಷಿಕರಿಗೂ ನೆರವಾಗಿದ್ದಾರೆ. ಈಗ ಹಲಸು ಮೌಲ್ಯವರ್ಧನೆಗೊಂಡು ಸುಮಾರು 25  ಬಗೆಯ ವಿವಿಧ ಹಲಸಿನ ಖಾದ್ಯಗಳು ಅಲ್ಲಿ ಮಾರಾಟಕ್ಕೂ ಲಭ್ಯವಿದೆ.

ಬಂಟ್ವಾಳದ ಪಾಣೆಮಂಗಳೂರಿನ ಪೊನೋಸ್ ಹಲಸಿನಂಗಡಿ ಈಗ ಗಮನಸೆಳೆಯುತ್ತಿದೆ. ಕೇರಳದಲ್ಲಿ  ಮಾತ್ರವೇ ಹಲಸಿನಂಗಡಿ ಕಾಣಸಿಗುತ್ತಿದ್ದ ಸಮಯ ಇತ್ತು, ಈಗ ಕರ್ನಾಟಕದ ಅದರಲ್ಲೂ ಬಂಟ್ವಾಳದಲ್ಲಿ  ಹಲಸಿನಂಗಡಿ ಕಾಣುತ್ತಿದೆ. ಬಂಟ್ವಾಳದ ಹಲಸು ಪ್ರೇಮಿ ಕೂಟದ ಮೌನೀಶ್‌ ಮಲ್ಯ ಅವರು ಇದರ ಸಾರಥಿ. ಕಳೆದ ಕೆಲವು ಸಮಯಗಳಿಂದ ಹಲಸಿನಿಂದ ತಯಾರಿಸಬಹುದಾದ ವಿವಿಧ ಉತ್ಪನ್ನಗಳ ಬಗ್ಗೆ ಅಧ್ಯಯನ ಮಾಡಿ, ತಾವೇ ಸ್ವತ: ತಯಾರಿಸಿ, ಅದರಲ್ಲಿ  ಇನ್ನಷ್ಟು ಪರಿಣತಿಯನ್ನು  ಪಡೆದು ಇದೀಗ ಅಧಿಕೃತವಾಗಿ ಹಲಸಿನಂಗಡಿಗೆ ಚಾಲನೆ ನೀಡಿದ್ದಾರೆ. ಈಗ ಒಂದಲ್ಲ, ಎರಡಲ್ಲ  ಸುಮಾರು 25  ಬಗೆಯ ಹಲಸಿನ ಖಾದ್ಯಗಳು ಇಲ್ಲಿ  ಲಭ್ಯವಿದೆ. ಹಲಸಿನ ಹಪ್ಪಳದಿಂದ ತೊಡಗಿ ಐಸ್ ಕ್ರೀಂ ವರೆಗೆ ಇಲ್ಲಿ  ವಿವಿಧ ಬಗೆಯ ಹಲಸಿನದ್ದೇ ತಿಂಡಿಗಳು ಸಿಗುತ್ತವೆ. ತಾವೇ ಮೌಲ್ಯವರ್ಧನೆ ಮಾಡುವ ಹಲಸು ಉತ್ಪನ್ನಗಳ ಜೊತೆಗೆ ಕೃಷಿಕರು ತಯಾರು ಮಾಡುವ ಹಲಸಿನ ಉತ್ಪನ್ನಗಳನ್ನು ಕೂಡಾ ಮಾರಾಟ ಮಾಡುತ್ತಾರೆ. ಹಲಸಿನ ಉತ್ಪನ್ನಗಳು ಎಲ್ಲೆಲ್ಲಾ ಲಭ್ಯವಿದೆಯೋ ಅಲ್ಲಿಂದೆಲ್ಲಾ ತರುತ್ತಾರೆ. ಕೃಷಿಕರಿಗೆ ಉಪಯೋಗವಾಗಬೇಕು ಹಾಗೂ ಹಲಸು ಪ್ರತೀ ಮನೆಗೂ ವರ್ಷದ ಎಲ್ಲಾ ಸಮಯದಲ್ಲೂ ಲಭ್ಯವಾಗಬೇಕು ಎನ್ನುವುದು  ಮೌನೀಶ್‌ ಮಲ್ಯರ ಉದ್ದೇಶ.

ಹಲಸನ್ನು ಸ್ಥಳೀಯ ಕೃಷಿಕರ ತೋಟದಿಂದಲೇ ಖರೀದಿ ಮಾಡುತ್ತಾರೆ. ಕೃಷಿಕರಿಗೆ ಉತ್ತಮ ಧಾರಣೆ ನೀಡಿ ಖರೀದಿ ಮಾಡಿ ಬಳಿಕ ಗುಣಮಟ್ಟದ ಹಣ್ಣುಗಳ ಮಾರಾಟದ ಬಳಿಕ ಉಳಿದ ಹಣ್ಣುಗಳಲ್ಲಿ  ಹಪ್ಪಳ ಇತ್ಯಾದಿ ಮೌಲ್ಯವರ್ಧನೆ ಮಾಡುತ್ತಾರೆ. ಹೀಗೇ ಈ ಬಾರಿ ಸುಮಾರು ಹತ್ತು ಸಾವಿರ ಕೆಜಿಯಷ್ಟು ಹಲಸು ಖರೀದಿ ಹಾಗೂ ಮಾರಾಟ ಮಾಡಿದ್ದಾರೆ. ಈ ಮೂಲಕ ಕೃಷಿಕರಿಗೂ ನೆರವಾಗಿದ್ದಾರೆ. ಕೆಲವು ಕೃಷಿಕರು ಹಲಸಿನ ಮೌಲ್ಯವರ್ಧನೆ ಮಾಡಿಯೇ ನೀಡುತ್ತಾರೆ. ಅದಕ್ಕೂ ವೇದಿಕೆ ಕಲ್ಪಿಸಿದ್ದಾರೆ, ಗುಣಮಟ್ಟ ಕಾಪಾಡಿಕೊಂಡವರಿಗೆ ಮಾತ್ರವೇ ಆದ್ಯತೆ ನೀಡಿದ್ದಾರೆ.

Advertisement

ಈ ಬಾರಿ ಹಲಸು ಗಿಡಗಳು, ತಳಿ ಸಂರಕ್ಷಣೆ ಕಡೆಗೂ ಮೌನೀಶ್‌ ಮಲ್ಯ ಅವರು ಗಮನ ಹರಿಸಿದ್ದು ಸುಮಾರು  2  ಸಾವಿರ ಕಸಿ ಹಲಸು ಗಿಡಗಳನ್ನು  ತಯಾರು ಮಾಡಿಸಿ ಕೃಷಿಕರಿಗೆ ನೀಡಿ ಹಲಸು ಖರೀದಿ ಮಾಡುವ ಭರವಸೆ ನೀಡಿದ್ದಾರೆ. ಹಲಸು ಪ್ರತೀ ಮನೆಯಲ್ಲೂ ಉಪಯೋಗದ ವಸ್ತುವಾಗಬೇಕು ಎಂಬುದು ನಮ್ಮ ಉದ್ದೇಶ ಎನ್ನುವ ಮೌನೀಶ್‌ ಮಲ್ಯರು, ಹಲಸಿನ ಹಣ್ಣನ್ನು  ಖರೀದಿ ಮಾಡುವವರು  ಅನೇಕರು ಇದ್ದಾರೆ, ಆದರೆ ಹಲಸು ಬೆಳೆಯುವ ಹಾಗೂ ಮಾರಾಟ ಮಾಡುವ ಕೃಷಿಕರ ಸಂಖ್ಯೆ ಹೆಚ್ಚಾಗಬೇಕಿದೆ ಎನ್ನುತ್ತಾರೆ. ದೊಡ್ಡ ದೊಡ್ಡ ಕಾರಲ್ಲಿ  ಬರುವ ಮಂದಿ ಹಲಸನ್ನು  ಹೊತ್ತೊಯ್ಯಲು ಅಂಜುವುದಿಲ್ಲ, ಆದರೆ ತೋಟದಿಂದ ಕೃಷಿಕರು ಹಲಸು ಮನೆಗೆ ತರಲು ಅಂಜಿಕೆ ಮಾಡುವುದನ್ನು ಈಗ ಕಾಣುತ್ತಿದ್ದೇವೆ, ಇದು ಬದಲಾಗಬೇಕು, ಹಲಸು ಕೂಡಾ ಆದಾಯ ತರುವ ಕೃಷಿಯಾಗಲಿದೆ ಎನ್ನುತ್ತಾರೆ ಮೌನೀಶ್‌ ಮಲ್ಯರು.

ಮೌನೀಶ್‌ ಮಲ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

7 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

14 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

18 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

20 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago