Advertisement
MIRROR FOCUS

ಕರಾವಳಿಯಲ್ಲೂ ಹಲಸಿಗೆ ಬರುತ್ತಿದೆ ಮಾನ | 10 ಸಾವಿರ ಕೆಜಿ ಹಲಸಿನ ಹಣ್ಣು ಮಾರಾಟ | ರೈತರಿಂದ ಗ್ರಾಹಕರಿಗೆ ನೇರ ವ್ಯವಸ್ಥೆ ಮಾಡಿದ ಬಂಟ್ವಾಳದ ಹಲಸಿನಂಗಡಿ |

Share

ಹಲಸು ಇನ್ನು ಕೃಷಿಕರಲ್ಲಿ ಎಸೆಯುವ ವಸ್ತುವಲ್ಲ. ಅದಕ್ಕೂ ಮಾನ-ಸಮ್ಮಾನಗಳು ಬಂದಿವೆ. ಬಂಟ್ವಾಳದ ಪೊನೋಸ್ ಹಲಸಿನಂಗಡಿಯಲ್ಲಿ  ಹಲಸು ಪ್ರೇಮಿ ಕೂಟದ ಮೌನೀಶ್‌ ಮಲ್ಯರು  ಈ ಬಾರು 10 ಸಾವಿರ ಕೆಜಿ ಹಲಸು  ಮಾರಾಟ ಮಾಡಿದ್ದಾರೆ. ಈ ಮೂಲಕ ಕೃಷಿಕರಿಗೂ ನೆರವಾಗಿದ್ದಾರೆ. ಈಗ ಹಲಸು ಮೌಲ್ಯವರ್ಧನೆಗೊಂಡು ಸುಮಾರು 25  ಬಗೆಯ ವಿವಿಧ ಹಲಸಿನ ಖಾದ್ಯಗಳು ಅಲ್ಲಿ ಮಾರಾಟಕ್ಕೂ ಲಭ್ಯವಿದೆ.

ಬಂಟ್ವಾಳದ ಪಾಣೆಮಂಗಳೂರಿನ ಪೊನೋಸ್ ಹಲಸಿನಂಗಡಿ ಈಗ ಗಮನಸೆಳೆಯುತ್ತಿದೆ. ಕೇರಳದಲ್ಲಿ  ಮಾತ್ರವೇ ಹಲಸಿನಂಗಡಿ ಕಾಣಸಿಗುತ್ತಿದ್ದ ಸಮಯ ಇತ್ತು, ಈಗ ಕರ್ನಾಟಕದ ಅದರಲ್ಲೂ ಬಂಟ್ವಾಳದಲ್ಲಿ  ಹಲಸಿನಂಗಡಿ ಕಾಣುತ್ತಿದೆ. ಬಂಟ್ವಾಳದ ಹಲಸು ಪ್ರೇಮಿ ಕೂಟದ ಮೌನೀಶ್‌ ಮಲ್ಯ ಅವರು ಇದರ ಸಾರಥಿ. ಕಳೆದ ಕೆಲವು ಸಮಯಗಳಿಂದ ಹಲಸಿನಿಂದ ತಯಾರಿಸಬಹುದಾದ ವಿವಿಧ ಉತ್ಪನ್ನಗಳ ಬಗ್ಗೆ ಅಧ್ಯಯನ ಮಾಡಿ, ತಾವೇ ಸ್ವತ: ತಯಾರಿಸಿ, ಅದರಲ್ಲಿ  ಇನ್ನಷ್ಟು ಪರಿಣತಿಯನ್ನು  ಪಡೆದು ಇದೀಗ ಅಧಿಕೃತವಾಗಿ ಹಲಸಿನಂಗಡಿಗೆ ಚಾಲನೆ ನೀಡಿದ್ದಾರೆ. ಈಗ ಒಂದಲ್ಲ, ಎರಡಲ್ಲ  ಸುಮಾರು 25  ಬಗೆಯ ಹಲಸಿನ ಖಾದ್ಯಗಳು ಇಲ್ಲಿ  ಲಭ್ಯವಿದೆ. ಹಲಸಿನ ಹಪ್ಪಳದಿಂದ ತೊಡಗಿ ಐಸ್ ಕ್ರೀಂ ವರೆಗೆ ಇಲ್ಲಿ  ವಿವಿಧ ಬಗೆಯ ಹಲಸಿನದ್ದೇ ತಿಂಡಿಗಳು ಸಿಗುತ್ತವೆ. ತಾವೇ ಮೌಲ್ಯವರ್ಧನೆ ಮಾಡುವ ಹಲಸು ಉತ್ಪನ್ನಗಳ ಜೊತೆಗೆ ಕೃಷಿಕರು ತಯಾರು ಮಾಡುವ ಹಲಸಿನ ಉತ್ಪನ್ನಗಳನ್ನು ಕೂಡಾ ಮಾರಾಟ ಮಾಡುತ್ತಾರೆ. ಹಲಸಿನ ಉತ್ಪನ್ನಗಳು ಎಲ್ಲೆಲ್ಲಾ ಲಭ್ಯವಿದೆಯೋ ಅಲ್ಲಿಂದೆಲ್ಲಾ ತರುತ್ತಾರೆ. ಕೃಷಿಕರಿಗೆ ಉಪಯೋಗವಾಗಬೇಕು ಹಾಗೂ ಹಲಸು ಪ್ರತೀ ಮನೆಗೂ ವರ್ಷದ ಎಲ್ಲಾ ಸಮಯದಲ್ಲೂ ಲಭ್ಯವಾಗಬೇಕು ಎನ್ನುವುದು  ಮೌನೀಶ್‌ ಮಲ್ಯರ ಉದ್ದೇಶ.

ಹಲಸನ್ನು ಸ್ಥಳೀಯ ಕೃಷಿಕರ ತೋಟದಿಂದಲೇ ಖರೀದಿ ಮಾಡುತ್ತಾರೆ. ಕೃಷಿಕರಿಗೆ ಉತ್ತಮ ಧಾರಣೆ ನೀಡಿ ಖರೀದಿ ಮಾಡಿ ಬಳಿಕ ಗುಣಮಟ್ಟದ ಹಣ್ಣುಗಳ ಮಾರಾಟದ ಬಳಿಕ ಉಳಿದ ಹಣ್ಣುಗಳಲ್ಲಿ  ಹಪ್ಪಳ ಇತ್ಯಾದಿ ಮೌಲ್ಯವರ್ಧನೆ ಮಾಡುತ್ತಾರೆ. ಹೀಗೇ ಈ ಬಾರಿ ಸುಮಾರು ಹತ್ತು ಸಾವಿರ ಕೆಜಿಯಷ್ಟು ಹಲಸು ಖರೀದಿ ಹಾಗೂ ಮಾರಾಟ ಮಾಡಿದ್ದಾರೆ. ಈ ಮೂಲಕ ಕೃಷಿಕರಿಗೂ ನೆರವಾಗಿದ್ದಾರೆ. ಕೆಲವು ಕೃಷಿಕರು ಹಲಸಿನ ಮೌಲ್ಯವರ್ಧನೆ ಮಾಡಿಯೇ ನೀಡುತ್ತಾರೆ. ಅದಕ್ಕೂ ವೇದಿಕೆ ಕಲ್ಪಿಸಿದ್ದಾರೆ, ಗುಣಮಟ್ಟ ಕಾಪಾಡಿಕೊಂಡವರಿಗೆ ಮಾತ್ರವೇ ಆದ್ಯತೆ ನೀಡಿದ್ದಾರೆ.

ಈ ಬಾರಿ ಹಲಸು ಗಿಡಗಳು, ತಳಿ ಸಂರಕ್ಷಣೆ ಕಡೆಗೂ ಮೌನೀಶ್‌ ಮಲ್ಯ ಅವರು ಗಮನ ಹರಿಸಿದ್ದು ಸುಮಾರು  2  ಸಾವಿರ ಕಸಿ ಹಲಸು ಗಿಡಗಳನ್ನು  ತಯಾರು ಮಾಡಿಸಿ ಕೃಷಿಕರಿಗೆ ನೀಡಿ ಹಲಸು ಖರೀದಿ ಮಾಡುವ ಭರವಸೆ ನೀಡಿದ್ದಾರೆ. ಹಲಸು ಪ್ರತೀ ಮನೆಯಲ್ಲೂ ಉಪಯೋಗದ ವಸ್ತುವಾಗಬೇಕು ಎಂಬುದು ನಮ್ಮ ಉದ್ದೇಶ ಎನ್ನುವ ಮೌನೀಶ್‌ ಮಲ್ಯರು, ಹಲಸಿನ ಹಣ್ಣನ್ನು  ಖರೀದಿ ಮಾಡುವವರು  ಅನೇಕರು ಇದ್ದಾರೆ, ಆದರೆ ಹಲಸು ಬೆಳೆಯುವ ಹಾಗೂ ಮಾರಾಟ ಮಾಡುವ ಕೃಷಿಕರ ಸಂಖ್ಯೆ ಹೆಚ್ಚಾಗಬೇಕಿದೆ ಎನ್ನುತ್ತಾರೆ. ದೊಡ್ಡ ದೊಡ್ಡ ಕಾರಲ್ಲಿ  ಬರುವ ಮಂದಿ ಹಲಸನ್ನು  ಹೊತ್ತೊಯ್ಯಲು ಅಂಜುವುದಿಲ್ಲ, ಆದರೆ ತೋಟದಿಂದ ಕೃಷಿಕರು ಹಲಸು ಮನೆಗೆ ತರಲು ಅಂಜಿಕೆ ಮಾಡುವುದನ್ನು ಈಗ ಕಾಣುತ್ತಿದ್ದೇವೆ, ಇದು ಬದಲಾಗಬೇಕು, ಹಲಸು ಕೂಡಾ ಆದಾಯ ತರುವ ಕೃಷಿಯಾಗಲಿದೆ ಎನ್ನುತ್ತಾರೆ ಮೌನೀಶ್‌ ಮಲ್ಯರು.

ಮೌನೀಶ್‌ ಮಲ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

12 minutes ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

43 minutes ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

14 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

22 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago