Advertisement
ಸುದ್ದಿಗಳು

ಹಲಸಿನೊಂದಿಗೆ ಫೋಟೋ | ಬಹುಮಾನ ವಿತರಣಾ ಕಾರ್ಯಕ್ರಮ | ಹಲಸು ಅನ್ನದ ಬಟ್ಟಲಿಗೆ ಬರುವಂತಾಗಲಿ |

Share

ಬಂಟ್ವಾಳ:ಹಲಸು ಒಂದು ಕಾಲದಲ್ಲಿ  ಹಸಿದ ಹೊಟ್ಟೆಯ ಆಹಾರವಾಗಿತ್ತು, ಬದಲಾದ ಪರಿಸ್ಥಿತಿಯಲ್ಲಿ ಮನುಷ್ಯನ ನಿರ್ಲಕ್ಷ್ಯದಿಂದ ಹಲಸು ಮೂಲೆಗುಂಪಾಗಿತ್ತು. ಈಗ ಮನೆಯಲ್ಲಿ ಅನ್ನದ ಬಟ್ಟಲಿಗೆ ಬರುತ್ತಿದೆ, ಹಲಸು ಕೂಡಾ ಉತ್ತಮ ಆಹಾರವಾಗಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ವಸಂತ ಬಿ ಬಾಳಿಗಾ ಹೇಳಿದರು.

Advertisement
Advertisement

ಅವರು  ರಾರಾಸಂ ಫೌಂಡೇಶನ್ ಬಂಟ್ವಾಳ ಮತ್ತು ಹಲಸು ಪ್ರೇಮಿ ಕೂಟ, ಬಂಟ್ವಾಳ ಇದರ ಸಹಯೋಗದಲ್ಲಿ ಆಯೋಜಿಸಿದ “ಹಲಸಿನೊಂದಿಗೆ ಫೋಟೋ” ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ  ಮಾತನಾಡಿದರು. ಹಲಸು ಬೆಳೆದರೆ ಮಾತ್ರಾ ಸಾಲದು ಅದರ ಮೌಲ್ಯವರ್ಧನೆ ಹಾಗೂ ಮಾರಾಟವೂ ಅಗತ್ಯವಿದೆ. ಅದನ್ನು  ಅತ್ಯಂತ ಸಮರ್ಥವಾಗಿ ಮಾಡುತ್ತಿರುವ ಹಲಸು ಪ್ರೇಮಿ ಕೂಟದ ಪಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ಎಂದರು.ಹಲಸು ನಮ್ಮ ಜೀವನದ ಒಂದು ಭಾಗ. ನಮ್ಮಲ್ಲಿ ಬೆಳೆದ ಹಲಸುಗಳಿಗೆ ಹೊಸ ರೂಪ ಕೊಟ್ಟು ಜನರಿಗೆ ಬಗೆ ಬಗೆಯ ತಿನಸುಗಳು ಸಿಗಲು  ಹಲಸಿನಂಗಡಿ ತುಂಬಾ ಸಹಕಾರಿ ಎಂದರು.

ಅತಿಥಿಗಳಾಗಿದ್ದ  ಅಂಕಣಗಾರ, ಅಡಿಕೆ ಪತ್ರಿಕೆ ಸಹಾಯಕ ಸಂಪಾದಕ ನಾ ಕಾರಂತ ಪೆರಾಜೆ ಮಾತನಾಡಿ, ಯಾವುದೇ ಆಂದೋಲನಗಳು ಹಂತ ಹಂತವಾಗಿ ಬೆಳೆಯಬೇಕು. ಹಲಸು ಆಂದೋಲನವು ಈಗ ಊಟದ ಬಟ್ಟಲಿಗೆ ಬಂದಿದೆ ಮಾತ್ರವಲ್ಲ ಕಾರ್ಪೋರೇಟ್‌ ವಲಯದಲ್ಲೂ ಹಲಸು ಸ್ಥಾನ ಪಡೆದಿದೆ.ಹಲಸು ಮಾರುಕಟ್ಟೆಯು ಇಂದು ವ್ಯಾಪಿಸಿದೆ. ಮೌಲ್ಯವರ್ಧನೆಯೂ ನಡೆಯುತ್ತಿದೆ ಇದು  ಆಶಾದಾಯಕ ಬೆಳವಣಿಗೆ ಎಂದರು.

ನಿವೃತ್ತ ಅರಣ್ಯ ಅಧಿಕಾರಿ ಮತ್ತು ಹಲಸು ಬೆಳೆಗಾರ ಗ್ಯಾಬ್ರಿಯಲ್‌ ವೇಗಸ್ ಮಾತನಾಡಿ, ಹಲಸು ಕೃಷಿಯೂ ಭವಿಷ್ಯದಲ್ಲಿ  ಉತ್ತಮ ಕೃಷಿಯಾಗುವುದರಲ್ಲಿ  ಸಂದೇಹವಿಲ್ಲ. ಆಹಾರ ಬೆಳೆಯೂ ಆದ ಹಲಸು ಬೆಳೆದು ಈ ಬಾರಿ ಆದಾಯಯೂ ಗಳಿಸಿದ್ದೇನೆ. ಹಲಸಿಗೆ ಮಾರುಕಟ್ಟೆ ಇಲ್ಲ ಎಂದು  ಅನೇಕರು ಹೇಳುತ್ತಿದ್ದರು. ಈ ವರ್ಷ ನಮ್ಮಲ್ಲಿ  ಬೆಳೆದ ಹಲಸಿಗೆ ಉತ್ತಮ ಬೇಡಿಕೆಯೂ ಬಂದಿತ್ತು ಎಂದರು.

 

ಕೃಷಿಕ, ಪತ್ರಕರ್ತ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿ, ಸಮ್ಮಿಶ್ರ ಕೃಷಿಯಿಂದ ಮಾತ್ರವೇ ಭವಿಷ್ಯದಲ್ಲಿ  ಕೃಷಿಕರ  ಆದಾಯ ದ್ವಿಗುಣವಾಗಲಿದೆ. ಹಲಸು ಮೌಲ್ಯವರ್ಧನೆಯ ಮೂಲಕ ಕೃಷಿಕರಿಗೆ ಉತ್ತಮ ಆದಾಯವಾಗಬಹುದು. ಕೃಷಿಕ,ಮೌಲ್ಯವರ್ಧನೆ, ಮಾರುಕಟ್ಟೆ, ಗ್ರಾಹಕರು ಇದೆಲ್ಲವೂ ಒಂದಕ್ಕೊಂದು ಸಂಬಂಧ ಹೊಂದಿರುವುರಿಂದ ಎಲ್ಲಾ ಕಡೆಯೂ ಗಮನ ಅಗತ್ಯವಿದೆ ಎಂದರು.

ಹಲಸು ಸ್ನೇಹಿ ಕೂಟದ  ಮುಳಿಯ ವೆಂಕಟ ಕೃಷ್ಣ ಶರ್ಮ  ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಪೋನೋಸ್ ಹಲಸಿನಂಗಡಿ ಮಾಲಕರು ಹಾಗೂ ಹಲಸು ಪ್ರೇಮಿಕೂಟದ ಮೌನೇಶ್ ಮಲ್ಯ ಮಾತನಾಡಿ, ಮುಂದಿನ ದಿನಗಳಲ್ಲಿ ವಿವಿಧ ಹಲಸು ತಳಿಗಳನ್ನು ಜನರಿಗೆ ನೀಡಿ ಹಲಸು ಸಂರಕ್ಷಣೆ ಹಾಗೂ ಕೃಷಿಕರಿಂದಲೇ ಹಲಸು ಖರೀದಿ ನಡೆಸುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಲಸಿನೊಂದಿಗೆ ಫೋಟೋ” ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.

ರಾರಾಸಂ ಸಂಸ್ಥೆಯ ಅಧ್ಯಕ್ಷರಾದ ರಾಧಾಕೃಷ್ಣ ಬಂಟ್ವಾಳ ಸ್ವಾಗತಿಸಿದರು. ರಾರಾಸಂ ನಿರ್ದೇಶಕರಾದ ಕೇಶವ್ ಮಾಸ್ಟರ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ದಾಮೋದರ್ ಮಾಸ್ಟರ್ ನಿರೂಪಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

12 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago