Advertisement
ಸುದ್ದಿಗಳು

ಹಲಸಿನೊಂದಿಗೆ ಫೋಟೋ | ಬಹುಮಾನ ವಿತರಣಾ ಕಾರ್ಯಕ್ರಮ | ಹಲಸು ಅನ್ನದ ಬಟ್ಟಲಿಗೆ ಬರುವಂತಾಗಲಿ |

Share

ಬಂಟ್ವಾಳ:ಹಲಸು ಒಂದು ಕಾಲದಲ್ಲಿ  ಹಸಿದ ಹೊಟ್ಟೆಯ ಆಹಾರವಾಗಿತ್ತು, ಬದಲಾದ ಪರಿಸ್ಥಿತಿಯಲ್ಲಿ ಮನುಷ್ಯನ ನಿರ್ಲಕ್ಷ್ಯದಿಂದ ಹಲಸು ಮೂಲೆಗುಂಪಾಗಿತ್ತು. ಈಗ ಮನೆಯಲ್ಲಿ ಅನ್ನದ ಬಟ್ಟಲಿಗೆ ಬರುತ್ತಿದೆ, ಹಲಸು ಕೂಡಾ ಉತ್ತಮ ಆಹಾರವಾಗಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ವಸಂತ ಬಿ ಬಾಳಿಗಾ ಹೇಳಿದರು.

ಅವರು  ರಾರಾಸಂ ಫೌಂಡೇಶನ್ ಬಂಟ್ವಾಳ ಮತ್ತು ಹಲಸು ಪ್ರೇಮಿ ಕೂಟ, ಬಂಟ್ವಾಳ ಇದರ ಸಹಯೋಗದಲ್ಲಿ ಆಯೋಜಿಸಿದ “ಹಲಸಿನೊಂದಿಗೆ ಫೋಟೋ” ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ  ಮಾತನಾಡಿದರು. ಹಲಸು ಬೆಳೆದರೆ ಮಾತ್ರಾ ಸಾಲದು ಅದರ ಮೌಲ್ಯವರ್ಧನೆ ಹಾಗೂ ಮಾರಾಟವೂ ಅಗತ್ಯವಿದೆ. ಅದನ್ನು  ಅತ್ಯಂತ ಸಮರ್ಥವಾಗಿ ಮಾಡುತ್ತಿರುವ ಹಲಸು ಪ್ರೇಮಿ ಕೂಟದ ಪಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ಎಂದರು.ಹಲಸು ನಮ್ಮ ಜೀವನದ ಒಂದು ಭಾಗ. ನಮ್ಮಲ್ಲಿ ಬೆಳೆದ ಹಲಸುಗಳಿಗೆ ಹೊಸ ರೂಪ ಕೊಟ್ಟು ಜನರಿಗೆ ಬಗೆ ಬಗೆಯ ತಿನಸುಗಳು ಸಿಗಲು  ಹಲಸಿನಂಗಡಿ ತುಂಬಾ ಸಹಕಾರಿ ಎಂದರು.

ಅತಿಥಿಗಳಾಗಿದ್ದ  ಅಂಕಣಗಾರ, ಅಡಿಕೆ ಪತ್ರಿಕೆ ಸಹಾಯಕ ಸಂಪಾದಕ ನಾ ಕಾರಂತ ಪೆರಾಜೆ ಮಾತನಾಡಿ, ಯಾವುದೇ ಆಂದೋಲನಗಳು ಹಂತ ಹಂತವಾಗಿ ಬೆಳೆಯಬೇಕು. ಹಲಸು ಆಂದೋಲನವು ಈಗ ಊಟದ ಬಟ್ಟಲಿಗೆ ಬಂದಿದೆ ಮಾತ್ರವಲ್ಲ ಕಾರ್ಪೋರೇಟ್‌ ವಲಯದಲ್ಲೂ ಹಲಸು ಸ್ಥಾನ ಪಡೆದಿದೆ.ಹಲಸು ಮಾರುಕಟ್ಟೆಯು ಇಂದು ವ್ಯಾಪಿಸಿದೆ. ಮೌಲ್ಯವರ್ಧನೆಯೂ ನಡೆಯುತ್ತಿದೆ ಇದು  ಆಶಾದಾಯಕ ಬೆಳವಣಿಗೆ ಎಂದರು.

ನಿವೃತ್ತ ಅರಣ್ಯ ಅಧಿಕಾರಿ ಮತ್ತು ಹಲಸು ಬೆಳೆಗಾರ ಗ್ಯಾಬ್ರಿಯಲ್‌ ವೇಗಸ್ ಮಾತನಾಡಿ, ಹಲಸು ಕೃಷಿಯೂ ಭವಿಷ್ಯದಲ್ಲಿ  ಉತ್ತಮ ಕೃಷಿಯಾಗುವುದರಲ್ಲಿ  ಸಂದೇಹವಿಲ್ಲ. ಆಹಾರ ಬೆಳೆಯೂ ಆದ ಹಲಸು ಬೆಳೆದು ಈ ಬಾರಿ ಆದಾಯಯೂ ಗಳಿಸಿದ್ದೇನೆ. ಹಲಸಿಗೆ ಮಾರುಕಟ್ಟೆ ಇಲ್ಲ ಎಂದು  ಅನೇಕರು ಹೇಳುತ್ತಿದ್ದರು. ಈ ವರ್ಷ ನಮ್ಮಲ್ಲಿ  ಬೆಳೆದ ಹಲಸಿಗೆ ಉತ್ತಮ ಬೇಡಿಕೆಯೂ ಬಂದಿತ್ತು ಎಂದರು.

 

ಕೃಷಿಕ, ಪತ್ರಕರ್ತ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿ, ಸಮ್ಮಿಶ್ರ ಕೃಷಿಯಿಂದ ಮಾತ್ರವೇ ಭವಿಷ್ಯದಲ್ಲಿ  ಕೃಷಿಕರ  ಆದಾಯ ದ್ವಿಗುಣವಾಗಲಿದೆ. ಹಲಸು ಮೌಲ್ಯವರ್ಧನೆಯ ಮೂಲಕ ಕೃಷಿಕರಿಗೆ ಉತ್ತಮ ಆದಾಯವಾಗಬಹುದು. ಕೃಷಿಕ,ಮೌಲ್ಯವರ್ಧನೆ, ಮಾರುಕಟ್ಟೆ, ಗ್ರಾಹಕರು ಇದೆಲ್ಲವೂ ಒಂದಕ್ಕೊಂದು ಸಂಬಂಧ ಹೊಂದಿರುವುರಿಂದ ಎಲ್ಲಾ ಕಡೆಯೂ ಗಮನ ಅಗತ್ಯವಿದೆ ಎಂದರು.

ಹಲಸು ಸ್ನೇಹಿ ಕೂಟದ  ಮುಳಿಯ ವೆಂಕಟ ಕೃಷ್ಣ ಶರ್ಮ  ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಪೋನೋಸ್ ಹಲಸಿನಂಗಡಿ ಮಾಲಕರು ಹಾಗೂ ಹಲಸು ಪ್ರೇಮಿಕೂಟದ ಮೌನೇಶ್ ಮಲ್ಯ ಮಾತನಾಡಿ, ಮುಂದಿನ ದಿನಗಳಲ್ಲಿ ವಿವಿಧ ಹಲಸು ತಳಿಗಳನ್ನು ಜನರಿಗೆ ನೀಡಿ ಹಲಸು ಸಂರಕ್ಷಣೆ ಹಾಗೂ ಕೃಷಿಕರಿಂದಲೇ ಹಲಸು ಖರೀದಿ ನಡೆಸುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಲಸಿನೊಂದಿಗೆ ಫೋಟೋ” ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.

ರಾರಾಸಂ ಸಂಸ್ಥೆಯ ಅಧ್ಯಕ್ಷರಾದ ರಾಧಾಕೃಷ್ಣ ಬಂಟ್ವಾಳ ಸ್ವಾಗತಿಸಿದರು. ರಾರಾಸಂ ನಿರ್ದೇಶಕರಾದ ಕೇಶವ್ ಮಾಸ್ಟರ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ದಾಮೋದರ್ ಮಾಸ್ಟರ್ ನಿರೂಪಿಸಿದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago