Advertisement
ಸುದ್ದಿಗಳು

ಹಲಸಿನೊಂದಿಗೆ ಫೋಟೋ | ಬಹುಮಾನ ವಿತರಣಾ ಕಾರ್ಯಕ್ರಮ | ಹಲಸು ಅನ್ನದ ಬಟ್ಟಲಿಗೆ ಬರುವಂತಾಗಲಿ |

Share

ಬಂಟ್ವಾಳ:ಹಲಸು ಒಂದು ಕಾಲದಲ್ಲಿ  ಹಸಿದ ಹೊಟ್ಟೆಯ ಆಹಾರವಾಗಿತ್ತು, ಬದಲಾದ ಪರಿಸ್ಥಿತಿಯಲ್ಲಿ ಮನುಷ್ಯನ ನಿರ್ಲಕ್ಷ್ಯದಿಂದ ಹಲಸು ಮೂಲೆಗುಂಪಾಗಿತ್ತು. ಈಗ ಮನೆಯಲ್ಲಿ ಅನ್ನದ ಬಟ್ಟಲಿಗೆ ಬರುತ್ತಿದೆ, ಹಲಸು ಕೂಡಾ ಉತ್ತಮ ಆಹಾರವಾಗಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ವಸಂತ ಬಿ ಬಾಳಿಗಾ ಹೇಳಿದರು.

ಅವರು  ರಾರಾಸಂ ಫೌಂಡೇಶನ್ ಬಂಟ್ವಾಳ ಮತ್ತು ಹಲಸು ಪ್ರೇಮಿ ಕೂಟ, ಬಂಟ್ವಾಳ ಇದರ ಸಹಯೋಗದಲ್ಲಿ ಆಯೋಜಿಸಿದ “ಹಲಸಿನೊಂದಿಗೆ ಫೋಟೋ” ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ  ಮಾತನಾಡಿದರು. ಹಲಸು ಬೆಳೆದರೆ ಮಾತ್ರಾ ಸಾಲದು ಅದರ ಮೌಲ್ಯವರ್ಧನೆ ಹಾಗೂ ಮಾರಾಟವೂ ಅಗತ್ಯವಿದೆ. ಅದನ್ನು  ಅತ್ಯಂತ ಸಮರ್ಥವಾಗಿ ಮಾಡುತ್ತಿರುವ ಹಲಸು ಪ್ರೇಮಿ ಕೂಟದ ಪಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ಎಂದರು.ಹಲಸು ನಮ್ಮ ಜೀವನದ ಒಂದು ಭಾಗ. ನಮ್ಮಲ್ಲಿ ಬೆಳೆದ ಹಲಸುಗಳಿಗೆ ಹೊಸ ರೂಪ ಕೊಟ್ಟು ಜನರಿಗೆ ಬಗೆ ಬಗೆಯ ತಿನಸುಗಳು ಸಿಗಲು  ಹಲಸಿನಂಗಡಿ ತುಂಬಾ ಸಹಕಾರಿ ಎಂದರು.

ಅತಿಥಿಗಳಾಗಿದ್ದ  ಅಂಕಣಗಾರ, ಅಡಿಕೆ ಪತ್ರಿಕೆ ಸಹಾಯಕ ಸಂಪಾದಕ ನಾ ಕಾರಂತ ಪೆರಾಜೆ ಮಾತನಾಡಿ, ಯಾವುದೇ ಆಂದೋಲನಗಳು ಹಂತ ಹಂತವಾಗಿ ಬೆಳೆಯಬೇಕು. ಹಲಸು ಆಂದೋಲನವು ಈಗ ಊಟದ ಬಟ್ಟಲಿಗೆ ಬಂದಿದೆ ಮಾತ್ರವಲ್ಲ ಕಾರ್ಪೋರೇಟ್‌ ವಲಯದಲ್ಲೂ ಹಲಸು ಸ್ಥಾನ ಪಡೆದಿದೆ.ಹಲಸು ಮಾರುಕಟ್ಟೆಯು ಇಂದು ವ್ಯಾಪಿಸಿದೆ. ಮೌಲ್ಯವರ್ಧನೆಯೂ ನಡೆಯುತ್ತಿದೆ ಇದು  ಆಶಾದಾಯಕ ಬೆಳವಣಿಗೆ ಎಂದರು.

ನಿವೃತ್ತ ಅರಣ್ಯ ಅಧಿಕಾರಿ ಮತ್ತು ಹಲಸು ಬೆಳೆಗಾರ ಗ್ಯಾಬ್ರಿಯಲ್‌ ವೇಗಸ್ ಮಾತನಾಡಿ, ಹಲಸು ಕೃಷಿಯೂ ಭವಿಷ್ಯದಲ್ಲಿ  ಉತ್ತಮ ಕೃಷಿಯಾಗುವುದರಲ್ಲಿ  ಸಂದೇಹವಿಲ್ಲ. ಆಹಾರ ಬೆಳೆಯೂ ಆದ ಹಲಸು ಬೆಳೆದು ಈ ಬಾರಿ ಆದಾಯಯೂ ಗಳಿಸಿದ್ದೇನೆ. ಹಲಸಿಗೆ ಮಾರುಕಟ್ಟೆ ಇಲ್ಲ ಎಂದು  ಅನೇಕರು ಹೇಳುತ್ತಿದ್ದರು. ಈ ವರ್ಷ ನಮ್ಮಲ್ಲಿ  ಬೆಳೆದ ಹಲಸಿಗೆ ಉತ್ತಮ ಬೇಡಿಕೆಯೂ ಬಂದಿತ್ತು ಎಂದರು.

 

ಕೃಷಿಕ, ಪತ್ರಕರ್ತ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿ, ಸಮ್ಮಿಶ್ರ ಕೃಷಿಯಿಂದ ಮಾತ್ರವೇ ಭವಿಷ್ಯದಲ್ಲಿ  ಕೃಷಿಕರ  ಆದಾಯ ದ್ವಿಗುಣವಾಗಲಿದೆ. ಹಲಸು ಮೌಲ್ಯವರ್ಧನೆಯ ಮೂಲಕ ಕೃಷಿಕರಿಗೆ ಉತ್ತಮ ಆದಾಯವಾಗಬಹುದು. ಕೃಷಿಕ,ಮೌಲ್ಯವರ್ಧನೆ, ಮಾರುಕಟ್ಟೆ, ಗ್ರಾಹಕರು ಇದೆಲ್ಲವೂ ಒಂದಕ್ಕೊಂದು ಸಂಬಂಧ ಹೊಂದಿರುವುರಿಂದ ಎಲ್ಲಾ ಕಡೆಯೂ ಗಮನ ಅಗತ್ಯವಿದೆ ಎಂದರು.

ಹಲಸು ಸ್ನೇಹಿ ಕೂಟದ  ಮುಳಿಯ ವೆಂಕಟ ಕೃಷ್ಣ ಶರ್ಮ  ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಪೋನೋಸ್ ಹಲಸಿನಂಗಡಿ ಮಾಲಕರು ಹಾಗೂ ಹಲಸು ಪ್ರೇಮಿಕೂಟದ ಮೌನೇಶ್ ಮಲ್ಯ ಮಾತನಾಡಿ, ಮುಂದಿನ ದಿನಗಳಲ್ಲಿ ವಿವಿಧ ಹಲಸು ತಳಿಗಳನ್ನು ಜನರಿಗೆ ನೀಡಿ ಹಲಸು ಸಂರಕ್ಷಣೆ ಹಾಗೂ ಕೃಷಿಕರಿಂದಲೇ ಹಲಸು ಖರೀದಿ ನಡೆಸುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಲಸಿನೊಂದಿಗೆ ಫೋಟೋ” ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.

ರಾರಾಸಂ ಸಂಸ್ಥೆಯ ಅಧ್ಯಕ್ಷರಾದ ರಾಧಾಕೃಷ್ಣ ಬಂಟ್ವಾಳ ಸ್ವಾಗತಿಸಿದರು. ರಾರಾಸಂ ನಿರ್ದೇಶಕರಾದ ಕೇಶವ್ ಮಾಸ್ಟರ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ದಾಮೋದರ್ ಮಾಸ್ಟರ್ ನಿರೂಪಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

9 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago