ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

June 30, 2025
7:16 AM
ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು ಮಾರಾಟ ಮಾಡಿದರೆ ಆರ್ಥಿಕ ಪ್ರಗತಿ ಹೊಂದಬಹುದು.

ಬೈಂದೂರು ಉತ್ಸವ ಸಮಿತಿ ಹಾಗೂ ಸಮಷ್ಠಿ ಪ್ರತಿಷ್ಠಾನ, ರೈತೋತ್ಥಾನ ಬಳಗ, ರೋಟರಿ ಹಾಗೂ ಲಯನ್ಸ್ ಕ್ಲಬ್  ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳವನ್ನು ಬೈಂದೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹಲಸು ಮೇಳಕ್ಕೆ ಉದ್ಯಮಿ ಗೋಕುಲ್ ಶೆಟ್ಟಿ ಚಾಲನೆ ನೀಡಿದರು.  3 ದಿನಗಳ ಹಲಸು ಮೇಳದಲ್ಲಿ  ಹಲಸಿನಿಂದ ತಯಾರಿಸಿದ ಖಾದ್ಯಗಳು ಗಮನಸೆಳೆಯಿತು.

ಹಲಸು ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲಸು ಬೆಳೆಗಾರರು, ಹಲಸಿನ ಮೌಲ್ಯವರ್ಧನೆ ಮಾಡುವ ವಿವಿಧ ಖಾದ್ಯಗಳ ಮಳಿಗೆಗಳು, ಹಲಸಿನ ಹೋಳಿಗೆ, ಹಪ್ಪಳ, ಸಂಡಿಗೆ, ಮುಳುಕ, ಕಬಾಬ್, ಮಂಚೂರಿ, ಹಲಸಿನ ಕಡಬು, ಐಸ್ ಕ್ರೀಮ್ ಮುಂತಾದ ಹಲವು ಬಗೆಯ ಹಲಸಿನ ಉತ್ಪನ್ನಗಳು ಹಾಗೂ ವಿವಿಧ ತಳಿಯ ಹಣ್ಣಿನ ಗಿಡ ಮತ್ತು ಹೂವಿನ ಗಿಡಗಳ ಮಳಿಗೆಗಳನ್ನು ತೆರೆಯಲಾಗಿದೆ.    ಕೈಮಗ್ಗದ ಸೀರೆಗಳು, ಕರಕುಶಲ ವಸ್ತುಗಳು, ಗ್ರಾಮೀಣ ಭಾಗದ ತಿಂಡಿ-ತಿನಿಸುಗಳ ಮಳಿಗೆಗಳು ಜನರ ಮನ ಸೆಳೆದವು.

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು ಮಾರಾಟ ಮಾಡಿದರೆ ಆರ್ಥಿಕ ಪ್ರಗತಿ ಹೊಂದಬಹುದು ಎಂದು ಕೃಷಿಕ ಸಮಾಜದ ಅಧ್ಯಕ್ಷ ವೆಂಕಟೇಶ್ ಹೊಸಕೋಟೆ ಹೇಳಿದರು. 

ಇಂತಹ ಮೇಳಗಳ ಮೂಲಕ ಯುವಕರಲ್ಲಿ ಕೃಷಿಯತ್ತ ಆಸಕ್ತಿ ಮೂಡಿಸಲು ಸಹಕಾರಿಯಾಗಿದೆ. ಜಿಲ್ಲೆಯ ಹವಾಮಾನಕ್ಕೆ ತಕ್ಕಂತೆ ಕೃಷಿ ಮಾಡುವುದು ಉತ್ತಮ. ವಿವಿಧ ಹಣ್ಣುಗಳಿಂದ ಖಾದ್ಯ ತಯಾರಿಸುವ ಬಗ್ಗೆ ಮಾಹಿತಿ ದೊರಕಿದ್ದು ಸಹಕಾರಿಯಾಗಿದೆ ಎಂದು  ರೈತ ಮಂಜುನಾಥ ಗಾಣಿಗ ಹೇಳುತ್ತಾರೆ. 

ಮೇಳಗಳು ಗ್ರಾಹಕರು ಹಾಗೂ ಕೃಷಿಕರಿಗೆ ಸಹಕಾರಿಯಾಗಿದೆ. ಕೆಲಸದ ಒತ್ತಡಗಳ ನಡುವೆ ಕೃಷಿ ಬಗ್ಗೆ ಮಾಹಿತಿ ಹಾಗೂ ಆಸಕ್ತಿ ಹೊಂದಲು ನೆರವಾಗುತ್ತದೆ ಎನ್ನುತ್ತಾರೆ  ಕೃಷಿಕ ಗೋಪಾಲ ನಾಯ್ಕ್.

ಚಂದ್ರ ಹಲಸು ಸೇರಿ ಇತರೆ ತಳಿಯ ಹಲಸುಗಳಿಗೆ ಮೇಳದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ತುಮಕೂರಿನ ಹಲಸು ಬೆಳೆಗಾರ ನರಸಿಂಹ ಮೂರ್ತಿ. ಕಳೆದ 9 ವರ್ಷಗಳಿಂದ ರಾಜ್ಯದ ವಿವಿದೆಡೆ ಹಲಸು ಮೇಳಗಳಲ್ಲಿ ಭಾಗವಹಿಸುತ್ತಿದ್ದೇನೆ, ಇಂತಹ ಮೇಳಗಳಿಂದ ಯಾವುದೇ ಮಧ್ಯವರ್ತಿಗಳಿಲ್ಲದೆ ಹಲಸುಗಳಿಗೆ ಉತ್ತಮ ದರ ದೊರೆಯುತ್ತಿದೆ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror