Advertisement
MIRROR FOCUS

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

Share

ಬೈಂದೂರು ಉತ್ಸವ ಸಮಿತಿ ಹಾಗೂ ಸಮಷ್ಠಿ ಪ್ರತಿಷ್ಠಾನ, ರೈತೋತ್ಥಾನ ಬಳಗ, ರೋಟರಿ ಹಾಗೂ ಲಯನ್ಸ್ ಕ್ಲಬ್  ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳವನ್ನು ಬೈಂದೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹಲಸು ಮೇಳಕ್ಕೆ ಉದ್ಯಮಿ ಗೋಕುಲ್ ಶೆಟ್ಟಿ ಚಾಲನೆ ನೀಡಿದರು.  3 ದಿನಗಳ ಹಲಸು ಮೇಳದಲ್ಲಿ  ಹಲಸಿನಿಂದ ತಯಾರಿಸಿದ ಖಾದ್ಯಗಳು ಗಮನಸೆಳೆಯಿತು.

ಹಲಸು ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲಸು ಬೆಳೆಗಾರರು, ಹಲಸಿನ ಮೌಲ್ಯವರ್ಧನೆ ಮಾಡುವ ವಿವಿಧ ಖಾದ್ಯಗಳ ಮಳಿಗೆಗಳು, ಹಲಸಿನ ಹೋಳಿಗೆ, ಹಪ್ಪಳ, ಸಂಡಿಗೆ, ಮುಳುಕ, ಕಬಾಬ್, ಮಂಚೂರಿ, ಹಲಸಿನ ಕಡಬು, ಐಸ್ ಕ್ರೀಮ್ ಮುಂತಾದ ಹಲವು ಬಗೆಯ ಹಲಸಿನ ಉತ್ಪನ್ನಗಳು ಹಾಗೂ ವಿವಿಧ ತಳಿಯ ಹಣ್ಣಿನ ಗಿಡ ಮತ್ತು ಹೂವಿನ ಗಿಡಗಳ ಮಳಿಗೆಗಳನ್ನು ತೆರೆಯಲಾಗಿದೆ.    ಕೈಮಗ್ಗದ ಸೀರೆಗಳು, ಕರಕುಶಲ ವಸ್ತುಗಳು, ಗ್ರಾಮೀಣ ಭಾಗದ ತಿಂಡಿ-ತಿನಿಸುಗಳ ಮಳಿಗೆಗಳು ಜನರ ಮನ ಸೆಳೆದವು.

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು ಮಾರಾಟ ಮಾಡಿದರೆ ಆರ್ಥಿಕ ಪ್ರಗತಿ ಹೊಂದಬಹುದು ಎಂದು ಕೃಷಿಕ ಸಮಾಜದ ಅಧ್ಯಕ್ಷ ವೆಂಕಟೇಶ್ ಹೊಸಕೋಟೆ ಹೇಳಿದರು.

ಇಂತಹ ಮೇಳಗಳ ಮೂಲಕ ಯುವಕರಲ್ಲಿ ಕೃಷಿಯತ್ತ ಆಸಕ್ತಿ ಮೂಡಿಸಲು ಸಹಕಾರಿಯಾಗಿದೆ. ಜಿಲ್ಲೆಯ ಹವಾಮಾನಕ್ಕೆ ತಕ್ಕಂತೆ ಕೃಷಿ ಮಾಡುವುದು ಉತ್ತಮ. ವಿವಿಧ ಹಣ್ಣುಗಳಿಂದ ಖಾದ್ಯ ತಯಾರಿಸುವ ಬಗ್ಗೆ ಮಾಹಿತಿ ದೊರಕಿದ್ದು ಸಹಕಾರಿಯಾಗಿದೆ ಎಂದು  ರೈತ ಮಂಜುನಾಥ ಗಾಣಿಗ ಹೇಳುತ್ತಾರೆ.

ಮೇಳಗಳು ಗ್ರಾಹಕರು ಹಾಗೂ ಕೃಷಿಕರಿಗೆ ಸಹಕಾರಿಯಾಗಿದೆ. ಕೆಲಸದ ಒತ್ತಡಗಳ ನಡುವೆ ಕೃಷಿ ಬಗ್ಗೆ ಮಾಹಿತಿ ಹಾಗೂ ಆಸಕ್ತಿ ಹೊಂದಲು ನೆರವಾಗುತ್ತದೆ ಎನ್ನುತ್ತಾರೆ  ಕೃಷಿಕ ಗೋಪಾಲ ನಾಯ್ಕ್.

ಚಂದ್ರ ಹಲಸು ಸೇರಿ ಇತರೆ ತಳಿಯ ಹಲಸುಗಳಿಗೆ ಮೇಳದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ತುಮಕೂರಿನ ಹಲಸು ಬೆಳೆಗಾರ ನರಸಿಂಹ ಮೂರ್ತಿ. ಕಳೆದ 9 ವರ್ಷಗಳಿಂದ ರಾಜ್ಯದ ವಿವಿದೆಡೆ ಹಲಸು ಮೇಳಗಳಲ್ಲಿ ಭಾಗವಹಿಸುತ್ತಿದ್ದೇನೆ, ಇಂತಹ ಮೇಳಗಳಿಂದ ಯಾವುದೇ ಮಧ್ಯವರ್ತಿಗಳಿಲ್ಲದೆ ಹಲಸುಗಳಿಗೆ ಉತ್ತಮ ದರ ದೊರೆಯುತ್ತಿದೆ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

7 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

7 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

11 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago