ಬೈಂದೂರು ಉತ್ಸವ ಸಮಿತಿ ಹಾಗೂ ಸಮಷ್ಠಿ ಪ್ರತಿಷ್ಠಾನ, ರೈತೋತ್ಥಾನ ಬಳಗ, ರೋಟರಿ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳವನ್ನು ಬೈಂದೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹಲಸು ಮೇಳಕ್ಕೆ ಉದ್ಯಮಿ ಗೋಕುಲ್ ಶೆಟ್ಟಿ ಚಾಲನೆ ನೀಡಿದರು. 3 ದಿನಗಳ ಹಲಸು ಮೇಳದಲ್ಲಿ ಹಲಸಿನಿಂದ ತಯಾರಿಸಿದ ಖಾದ್ಯಗಳು ಗಮನಸೆಳೆಯಿತು.
ಹಲಸು ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲಸು ಬೆಳೆಗಾರರು, ಹಲಸಿನ ಮೌಲ್ಯವರ್ಧನೆ ಮಾಡುವ ವಿವಿಧ ಖಾದ್ಯಗಳ ಮಳಿಗೆಗಳು, ಹಲಸಿನ ಹೋಳಿಗೆ, ಹಪ್ಪಳ, ಸಂಡಿಗೆ, ಮುಳುಕ, ಕಬಾಬ್, ಮಂಚೂರಿ, ಹಲಸಿನ ಕಡಬು, ಐಸ್ ಕ್ರೀಮ್ ಮುಂತಾದ ಹಲವು ಬಗೆಯ ಹಲಸಿನ ಉತ್ಪನ್ನಗಳು ಹಾಗೂ ವಿವಿಧ ತಳಿಯ ಹಣ್ಣಿನ ಗಿಡ ಮತ್ತು ಹೂವಿನ ಗಿಡಗಳ ಮಳಿಗೆಗಳನ್ನು ತೆರೆಯಲಾಗಿದೆ. ಕೈಮಗ್ಗದ ಸೀರೆಗಳು, ಕರಕುಶಲ ವಸ್ತುಗಳು, ಗ್ರಾಮೀಣ ಭಾಗದ ತಿಂಡಿ-ತಿನಿಸುಗಳ ಮಳಿಗೆಗಳು ಜನರ ಮನ ಸೆಳೆದವು.
ಮೇಳಗಳು ಗ್ರಾಹಕರು ಹಾಗೂ ಕೃಷಿಕರಿಗೆ ಸಹಕಾರಿಯಾಗಿದೆ. ಕೆಲಸದ ಒತ್ತಡಗಳ ನಡುವೆ ಕೃಷಿ ಬಗ್ಗೆ ಮಾಹಿತಿ ಹಾಗೂ ಆಸಕ್ತಿ ಹೊಂದಲು ನೆರವಾಗುತ್ತದೆ ಎನ್ನುತ್ತಾರೆ ಕೃಷಿಕ ಗೋಪಾಲ ನಾಯ್ಕ್.
ಚಂದ್ರ ಹಲಸು ಸೇರಿ ಇತರೆ ತಳಿಯ ಹಲಸುಗಳಿಗೆ ಮೇಳದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ತುಮಕೂರಿನ ಹಲಸು ಬೆಳೆಗಾರ ನರಸಿಂಹ ಮೂರ್ತಿ. ಕಳೆದ 9 ವರ್ಷಗಳಿಂದ ರಾಜ್ಯದ ವಿವಿದೆಡೆ ಹಲಸು ಮೇಳಗಳಲ್ಲಿ ಭಾಗವಹಿಸುತ್ತಿದ್ದೇನೆ, ಇಂತಹ ಮೇಳಗಳಿಂದ ಯಾವುದೇ ಮಧ್ಯವರ್ತಿಗಳಿಲ್ಲದೆ ಹಲಸುಗಳಿಗೆ ಉತ್ತಮ ದರ ದೊರೆಯುತ್ತಿದೆ ಎನ್ನುತ್ತಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…