MIRROR FOCUS

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೈಂದೂರು ಉತ್ಸವ ಸಮಿತಿ ಹಾಗೂ ಸಮಷ್ಠಿ ಪ್ರತಿಷ್ಠಾನ, ರೈತೋತ್ಥಾನ ಬಳಗ, ರೋಟರಿ ಹಾಗೂ ಲಯನ್ಸ್ ಕ್ಲಬ್  ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳವನ್ನು ಬೈಂದೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹಲಸು ಮೇಳಕ್ಕೆ ಉದ್ಯಮಿ ಗೋಕುಲ್ ಶೆಟ್ಟಿ ಚಾಲನೆ ನೀಡಿದರು.  3 ದಿನಗಳ ಹಲಸು ಮೇಳದಲ್ಲಿ  ಹಲಸಿನಿಂದ ತಯಾರಿಸಿದ ಖಾದ್ಯಗಳು ಗಮನಸೆಳೆಯಿತು.

Advertisement

ಹಲಸು ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲಸು ಬೆಳೆಗಾರರು, ಹಲಸಿನ ಮೌಲ್ಯವರ್ಧನೆ ಮಾಡುವ ವಿವಿಧ ಖಾದ್ಯಗಳ ಮಳಿಗೆಗಳು, ಹಲಸಿನ ಹೋಳಿಗೆ, ಹಪ್ಪಳ, ಸಂಡಿಗೆ, ಮುಳುಕ, ಕಬಾಬ್, ಮಂಚೂರಿ, ಹಲಸಿನ ಕಡಬು, ಐಸ್ ಕ್ರೀಮ್ ಮುಂತಾದ ಹಲವು ಬಗೆಯ ಹಲಸಿನ ಉತ್ಪನ್ನಗಳು ಹಾಗೂ ವಿವಿಧ ತಳಿಯ ಹಣ್ಣಿನ ಗಿಡ ಮತ್ತು ಹೂವಿನ ಗಿಡಗಳ ಮಳಿಗೆಗಳನ್ನು ತೆರೆಯಲಾಗಿದೆ.    ಕೈಮಗ್ಗದ ಸೀರೆಗಳು, ಕರಕುಶಲ ವಸ್ತುಗಳು, ಗ್ರಾಮೀಣ ಭಾಗದ ತಿಂಡಿ-ತಿನಿಸುಗಳ ಮಳಿಗೆಗಳು ಜನರ ಮನ ಸೆಳೆದವು.

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು ಮಾರಾಟ ಮಾಡಿದರೆ ಆರ್ಥಿಕ ಪ್ರಗತಿ ಹೊಂದಬಹುದು ಎಂದು ಕೃಷಿಕ ಸಮಾಜದ ಅಧ್ಯಕ್ಷ ವೆಂಕಟೇಶ್ ಹೊಸಕೋಟೆ ಹೇಳಿದರು.

ಇಂತಹ ಮೇಳಗಳ ಮೂಲಕ ಯುವಕರಲ್ಲಿ ಕೃಷಿಯತ್ತ ಆಸಕ್ತಿ ಮೂಡಿಸಲು ಸಹಕಾರಿಯಾಗಿದೆ. ಜಿಲ್ಲೆಯ ಹವಾಮಾನಕ್ಕೆ ತಕ್ಕಂತೆ ಕೃಷಿ ಮಾಡುವುದು ಉತ್ತಮ. ವಿವಿಧ ಹಣ್ಣುಗಳಿಂದ ಖಾದ್ಯ ತಯಾರಿಸುವ ಬಗ್ಗೆ ಮಾಹಿತಿ ದೊರಕಿದ್ದು ಸಹಕಾರಿಯಾಗಿದೆ ಎಂದು  ರೈತ ಮಂಜುನಾಥ ಗಾಣಿಗ ಹೇಳುತ್ತಾರೆ.

ಮೇಳಗಳು ಗ್ರಾಹಕರು ಹಾಗೂ ಕೃಷಿಕರಿಗೆ ಸಹಕಾರಿಯಾಗಿದೆ. ಕೆಲಸದ ಒತ್ತಡಗಳ ನಡುವೆ ಕೃಷಿ ಬಗ್ಗೆ ಮಾಹಿತಿ ಹಾಗೂ ಆಸಕ್ತಿ ಹೊಂದಲು ನೆರವಾಗುತ್ತದೆ ಎನ್ನುತ್ತಾರೆ  ಕೃಷಿಕ ಗೋಪಾಲ ನಾಯ್ಕ್.

ಚಂದ್ರ ಹಲಸು ಸೇರಿ ಇತರೆ ತಳಿಯ ಹಲಸುಗಳಿಗೆ ಮೇಳದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ತುಮಕೂರಿನ ಹಲಸು ಬೆಳೆಗಾರ ನರಸಿಂಹ ಮೂರ್ತಿ. ಕಳೆದ 9 ವರ್ಷಗಳಿಂದ ರಾಜ್ಯದ ವಿವಿದೆಡೆ ಹಲಸು ಮೇಳಗಳಲ್ಲಿ ಭಾಗವಹಿಸುತ್ತಿದ್ದೇನೆ, ಇಂತಹ ಮೇಳಗಳಿಂದ ಯಾವುದೇ ಮಧ್ಯವರ್ತಿಗಳಿಲ್ಲದೆ ಹಲಸುಗಳಿಗೆ ಉತ್ತಮ ದರ ದೊರೆಯುತ್ತಿದೆ ಎನ್ನುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

7 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

8 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

8 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

8 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

8 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

8 hours ago