Advertisement
MIRROR FOCUS

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

Share

ಬೈಂದೂರು ಉತ್ಸವ ಸಮಿತಿ ಹಾಗೂ ಸಮಷ್ಠಿ ಪ್ರತಿಷ್ಠಾನ, ರೈತೋತ್ಥಾನ ಬಳಗ, ರೋಟರಿ ಹಾಗೂ ಲಯನ್ಸ್ ಕ್ಲಬ್  ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳವನ್ನು ಬೈಂದೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹಲಸು ಮೇಳಕ್ಕೆ ಉದ್ಯಮಿ ಗೋಕುಲ್ ಶೆಟ್ಟಿ ಚಾಲನೆ ನೀಡಿದರು.  3 ದಿನಗಳ ಹಲಸು ಮೇಳದಲ್ಲಿ  ಹಲಸಿನಿಂದ ತಯಾರಿಸಿದ ಖಾದ್ಯಗಳು ಗಮನಸೆಳೆಯಿತು.

ಹಲಸು ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲಸು ಬೆಳೆಗಾರರು, ಹಲಸಿನ ಮೌಲ್ಯವರ್ಧನೆ ಮಾಡುವ ವಿವಿಧ ಖಾದ್ಯಗಳ ಮಳಿಗೆಗಳು, ಹಲಸಿನ ಹೋಳಿಗೆ, ಹಪ್ಪಳ, ಸಂಡಿಗೆ, ಮುಳುಕ, ಕಬಾಬ್, ಮಂಚೂರಿ, ಹಲಸಿನ ಕಡಬು, ಐಸ್ ಕ್ರೀಮ್ ಮುಂತಾದ ಹಲವು ಬಗೆಯ ಹಲಸಿನ ಉತ್ಪನ್ನಗಳು ಹಾಗೂ ವಿವಿಧ ತಳಿಯ ಹಣ್ಣಿನ ಗಿಡ ಮತ್ತು ಹೂವಿನ ಗಿಡಗಳ ಮಳಿಗೆಗಳನ್ನು ತೆರೆಯಲಾಗಿದೆ.    ಕೈಮಗ್ಗದ ಸೀರೆಗಳು, ಕರಕುಶಲ ವಸ್ತುಗಳು, ಗ್ರಾಮೀಣ ಭಾಗದ ತಿಂಡಿ-ತಿನಿಸುಗಳ ಮಳಿಗೆಗಳು ಜನರ ಮನ ಸೆಳೆದವು.

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು ಮಾರಾಟ ಮಾಡಿದರೆ ಆರ್ಥಿಕ ಪ್ರಗತಿ ಹೊಂದಬಹುದು ಎಂದು ಕೃಷಿಕ ಸಮಾಜದ ಅಧ್ಯಕ್ಷ ವೆಂಕಟೇಶ್ ಹೊಸಕೋಟೆ ಹೇಳಿದರು.

ಇಂತಹ ಮೇಳಗಳ ಮೂಲಕ ಯುವಕರಲ್ಲಿ ಕೃಷಿಯತ್ತ ಆಸಕ್ತಿ ಮೂಡಿಸಲು ಸಹಕಾರಿಯಾಗಿದೆ. ಜಿಲ್ಲೆಯ ಹವಾಮಾನಕ್ಕೆ ತಕ್ಕಂತೆ ಕೃಷಿ ಮಾಡುವುದು ಉತ್ತಮ. ವಿವಿಧ ಹಣ್ಣುಗಳಿಂದ ಖಾದ್ಯ ತಯಾರಿಸುವ ಬಗ್ಗೆ ಮಾಹಿತಿ ದೊರಕಿದ್ದು ಸಹಕಾರಿಯಾಗಿದೆ ಎಂದು  ರೈತ ಮಂಜುನಾಥ ಗಾಣಿಗ ಹೇಳುತ್ತಾರೆ.

ಮೇಳಗಳು ಗ್ರಾಹಕರು ಹಾಗೂ ಕೃಷಿಕರಿಗೆ ಸಹಕಾರಿಯಾಗಿದೆ. ಕೆಲಸದ ಒತ್ತಡಗಳ ನಡುವೆ ಕೃಷಿ ಬಗ್ಗೆ ಮಾಹಿತಿ ಹಾಗೂ ಆಸಕ್ತಿ ಹೊಂದಲು ನೆರವಾಗುತ್ತದೆ ಎನ್ನುತ್ತಾರೆ  ಕೃಷಿಕ ಗೋಪಾಲ ನಾಯ್ಕ್.

ಚಂದ್ರ ಹಲಸು ಸೇರಿ ಇತರೆ ತಳಿಯ ಹಲಸುಗಳಿಗೆ ಮೇಳದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ತುಮಕೂರಿನ ಹಲಸು ಬೆಳೆಗಾರ ನರಸಿಂಹ ಮೂರ್ತಿ. ಕಳೆದ 9 ವರ್ಷಗಳಿಂದ ರಾಜ್ಯದ ವಿವಿದೆಡೆ ಹಲಸು ಮೇಳಗಳಲ್ಲಿ ಭಾಗವಹಿಸುತ್ತಿದ್ದೇನೆ, ಇಂತಹ ಮೇಳಗಳಿಂದ ಯಾವುದೇ ಮಧ್ಯವರ್ತಿಗಳಿಲ್ಲದೆ ಹಲಸುಗಳಿಗೆ ಉತ್ತಮ ದರ ದೊರೆಯುತ್ತಿದೆ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

8 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago