Advertisement
ಸುದ್ದಿಗಳು

4,33,333 ರೂಪಾಯಿಗೆ ಹರಾಜಾದ ಒಂದು ಹಲಸಿನ ಹಣ್ಣು…! | ಅಚ್ಚರಿಯೇ ಸರಿ

Share

ಹಲಸಿನ ಸೀಸನ್ ಶುರುವಾಗೇ ಬಿಟ್ಟಿದೆ. ಪಲ್ಯ, ಹುಳಿ, ಹಪ್ಪಳ ಹೀಗೆ ನಾನಾ ಪದಾರ್ಥಗಳನ್ನು ಮಾಡೋದೊಂದೇ ಅಲ್ಲದೇ, ಸಿಹಿ ಸಿಹಿ ಹಲಸಿನ ಸೊಳೆಗಳನ್ನ ತಿನ್ನೋದೇ ಒಂದು ಖುಷಿ. ಇದೀಗ ಇಲ್ಲೊಂದು  ಹಲಸಿನ ಹಣ್ಣು ಬರೋಬ್ಬರಿ 4.33 ಲಕ್ಷ ರೂಪಾಯಿಗೆ ಹರಾಜಾಗಿ ಸಖತ್ ಸುದ್ದಿ ಮಾಡುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲರಪಟ್ಣದ ನವೀಕೃತ ಮಸೀದಿಯ ಉದ್ಘಾಟನೆ ವೇಳೆ ಈ ಅಪರೂಪದ ಘಟನೆ ನಡೆದಿದೆ.

4,33,333 ರೂಪಾಯಿಗೆ ಹರಾಜು ಗೆದ್ದರು ನೋಡಿ..! : ಮಸೀದಿಗೆ ಅರ್ಪಣೆಯಾಗಿದ್ದ ಹಲಸಿನ ಹಣ್ಣನ್ನು ಹರಾಜಿಗೆ ಇಡಲಾಗಿತ್ತು. ಈ ಹರಾಜಿನಲ್ಲಿ ಸ್ಥಳೀಯ ಪ್ರಮುಖರಾದ ಅಝೀಜ್ ಹಾಗೂ ಲತೀಫ್ ಎಂಬುವವರ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೆ ಲತೀಫ್ ಹಲಸಿನ ಹಣ್ಣನ್ನು ಬರೋಬ್ಬರಿ 4,33,333 ರೂಪಾಯಿಗಳಿಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಜನರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇದೊಂದೇ ಅಲ್ಲದೆ, ಹಲವು ವಸ್ತುಗಳನ್ನು ಹರಾಜು ಮಾಡಲಾಗಿದ್ದು, ಒಳ್ಳೆಯ ಮೊತ್ತ ಲಭಿಸಿದೆ. ಈ ಮೊತ್ತವನ್ನು ಆಡಳಿತ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

13 minutes ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

11 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

15 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

21 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago