Advertisement
ಸುದ್ದಿಗಳು

ಹೊಸರುಚಿ | ಹಲಸಿನ ಬೀಜ ಚನ್ನ ಸಾಂಬಾರ್

Share

ಹಲಸಿನ ಬೀಜ ಚನ್ನ ಸಾಂಬಾರ್ ಬೇಕಾಗುವ ಸಾಮಗ್ರಿಗಳು :  ಹಲಸಿನ ಬೀಜ 1 ಕಪ್ ಜಜ್ಜಿ ಸಿಪ್ಪೆ ತೆಗೆದು ಕ್ಲೀನ್ ಮಾಡಿ ಇಟ್ಟು ಕೊಳ್ಳಿ.
ಚನ್ನ 1/4 ಕಪ್ ನೆನೆ ಹಾಕಿ ಇಟ್ಟು ಕೊಳ್ಳಿ.  ಫ್ರೈ ಮಾಡಿ ಕೊಳ್ಳಲು:  ಕೆಂಪು ಮೆಣಸು 3( ಖಾರ ಜಾಸ್ತಿ ಬೇಕಾದರೆ ಜಾಸ್ತಿ ಹಾಕಬಹುದು), ಉದ್ದಿನ ಬೇಳೆ 1 ಚಮಚ, ಸಾಸಿವೆ ಸ್ವಲ್ಪ, ಕೊತ್ತಂಬರಿ ಬೀಜ 1 ಚಮಚ, ಜೀರಿಗೆ 3/4 ಚಮಚ, ಹಿಂಗು ಸ್ವಲ್ಪ, ಮೆಂತೆ ಕಾಳು ಸ್ವಲ್ಪ, ಸ್ವಲ್ಪ ಎಣ್ಣೆ ಹಾಕಿ ಫ್ರೈ ಮಾಡಿ.

ಮಾಡುವ ವಿಧಾನ : ಮೊದಲಿಗೆ ಹಲಸಿನ ಬೀಜ, ಚನ್ನ ಉಪ್ಪು ರುಚಿಗೆ ತಕ್ಕಷ್ಟು, ಚಿಕ್ಕ ತುಂಡು ಬೆಲ್ಲ, ನೀರು ಹಾಕಿ ಬೇಯಿಸಿಕೊಳ್ಳಿ. ಜಾರ್ ಗೆ ಫ್ರೈ ಮಾಡಿದ ಸಾಮಗ್ರಿಗಳನ್ನು ಹಾಕಿ ಇದಕ್ಕೆ ಕಾಯಿತುರಿ 1/2 ಕಪ್, ಅರಿಸಿನ ಪುಡಿ ಸ್ವಲ್ಪ ಹುಣಸೆ ಹಣ್ಣು ಹಾಕಿ ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಬೇಯಿಸಿದ ಹಲಸಿನ ಬೀಜ ಚನ್ನ ಇದಕ್ಕೆ ರುಬ್ಬಿದ ಮಿಶ್ರಣವನ್ನು ಸೇರಿಸಿ ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ ಕುದಿಸಿ ಸ್ಟವ್ ಆಫ್ ಮಾಡಿ.  ನಂತರ ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಒಗ್ಗರಣೆ ಚಟಪಟಾಯಿಸಿ. ಬಿಸಿ ಬಿಸಿಯಾದ ದೋಸೆ, ಅನ್ನ ಜೊತೆಗೆ ಸೂಪರ್. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

4 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

4 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

5 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

14 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

14 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

18 hours ago