Advertisement
ಸುದ್ದಿಗಳು

ಹೊಸರುಚಿ | ಹಲಸಿನ ಬೀಜ ಚನ್ನ ಸಾಂಬಾರ್

Share

ಹಲಸಿನ ಬೀಜ ಚನ್ನ ಸಾಂಬಾರ್ ಬೇಕಾಗುವ ಸಾಮಗ್ರಿಗಳು :  ಹಲಸಿನ ಬೀಜ 1 ಕಪ್ ಜಜ್ಜಿ ಸಿಪ್ಪೆ ತೆಗೆದು ಕ್ಲೀನ್ ಮಾಡಿ ಇಟ್ಟು ಕೊಳ್ಳಿ.
ಚನ್ನ 1/4 ಕಪ್ ನೆನೆ ಹಾಕಿ ಇಟ್ಟು ಕೊಳ್ಳಿ.  ಫ್ರೈ ಮಾಡಿ ಕೊಳ್ಳಲು:  ಕೆಂಪು ಮೆಣಸು 3( ಖಾರ ಜಾಸ್ತಿ ಬೇಕಾದರೆ ಜಾಸ್ತಿ ಹಾಕಬಹುದು), ಉದ್ದಿನ ಬೇಳೆ 1 ಚಮಚ, ಸಾಸಿವೆ ಸ್ವಲ್ಪ, ಕೊತ್ತಂಬರಿ ಬೀಜ 1 ಚಮಚ, ಜೀರಿಗೆ 3/4 ಚಮಚ, ಹಿಂಗು ಸ್ವಲ್ಪ, ಮೆಂತೆ ಕಾಳು ಸ್ವಲ್ಪ, ಸ್ವಲ್ಪ ಎಣ್ಣೆ ಹಾಕಿ ಫ್ರೈ ಮಾಡಿ.

ಮಾಡುವ ವಿಧಾನ : ಮೊದಲಿಗೆ ಹಲಸಿನ ಬೀಜ, ಚನ್ನ ಉಪ್ಪು ರುಚಿಗೆ ತಕ್ಕಷ್ಟು, ಚಿಕ್ಕ ತುಂಡು ಬೆಲ್ಲ, ನೀರು ಹಾಕಿ ಬೇಯಿಸಿಕೊಳ್ಳಿ. ಜಾರ್ ಗೆ ಫ್ರೈ ಮಾಡಿದ ಸಾಮಗ್ರಿಗಳನ್ನು ಹಾಕಿ ಇದಕ್ಕೆ ಕಾಯಿತುರಿ 1/2 ಕಪ್, ಅರಿಸಿನ ಪುಡಿ ಸ್ವಲ್ಪ ಹುಣಸೆ ಹಣ್ಣು ಹಾಕಿ ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಬೇಯಿಸಿದ ಹಲಸಿನ ಬೀಜ ಚನ್ನ ಇದಕ್ಕೆ ರುಬ್ಬಿದ ಮಿಶ್ರಣವನ್ನು ಸೇರಿಸಿ ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ ಕುದಿಸಿ ಸ್ಟವ್ ಆಫ್ ಮಾಡಿ.  ನಂತರ ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಒಗ್ಗರಣೆ ಚಟಪಟಾಯಿಸಿ. ಬಿಸಿ ಬಿಸಿಯಾದ ದೋಸೆ, ಅನ್ನ ಜೊತೆಗೆ ಸೂಪರ್. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

4 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

10 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

19 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

20 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

21 hours ago