ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

May 7, 2025
7:00 AM
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆಗೆ ಬೇಕಾಗುವ ಸಾಮಗ್ರಿಗಳು :  ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 3/4 ಕಪ್. ನೀರಿನಲ್ಲಿ ನೆನೆ ಹಾಕಿ ಇಟ್ಟುಕೊಳ್ಳಿ, ಕಡಲೆ ಬೇಳೆ 1/4 ಕಪ್ (ನೆನೆ ಹಾಕಿ), ಉದ್ದಿನ ಬೇಳೆ 2 ಚಮಚ, ಕಡಲೆ ಬೇಳೆ ಜೊತೆ ನೆನೆ ಹಾಕಿ, ಶುಂಠಿ, ಕರಿಬೇವಿನ ಸೊಪ್ಪು, ಓಂ ಕಾಳು (ಅಜ್ವಾನ್), ಹಸಿಮೆಣಸಿನ ಕಾಯಿ 2, ಇದಕ್ಕೆ ಉಪ್ಪು ಹಾಕಿಲ್ಲ.

Advertisement
Advertisement

ಮಾಡುವ ವಿಧಾನ: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ತೊಳೆದು ನೀರನ್ನು ಸೋಸಿ ಕೊಳ್ಳಿ. ನಂತರ ಜಾರ್ ಗೆ ಹಾಕಿ .ಇದಕ್ಕೆ ನೆನೆ ಹಾಕಿದ ಕಡಲೆ ಬೇಳೆ, ಉದ್ದಿನ ಬೇಳೆ, ಓಂ ಕಾಳು, ಶುಂಠಿ, ಕರಿಬೇವಿನ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಇದನ್ನು ಮಿಕ್ಸ್ ಮಾಡಿ . ನಂತರ ಕೈಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಚಟ್ಟಂಬಡೆ ರೆಡಿ ಬಿಸಿ ಬಿಸಿಯಾದ ಕಾಫಿ ಜೊತೆ ಗರಿಗರಿಯಾದ ಚಟ್ಟಂಬಡೆ ಸೂಪರ್.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group