Advertisement
ಅನುಕ್ರಮ

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

Share

ಮಳೆಗಾಲದಲ್ಲಿ ಮತ್ತು ಹಲಸಿನ ಹಣ್ಣಿನ ಸೀಸನ್‌ನಲ್ಲಿ ಹಲಸಿನ ಕಾಯಿಯಿಂದ ವಿವಿಧ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಅವುಗಳಲ್ಲಿ ಸರಳವಾಗಿ ಹಾಗೂ ಕಡಿಮೆ ಸಾಮಗ್ರಿಗಳಿಂದ ತಯಾರಿಸಬಹುದಾದ ರುಚಿಕರವಾದ ತಿನಿಸು ಎಂದರೆ ಹಲಸಿನ ಕಾಯಿ ಚಟ್ನಿ. ಬಿಸಿ ಅನ್ನ, ಗಂಜಿ, ದೋಸೆ ಅಥವಾ ಚಪಾತಿಯೊಂದಿಗೆ ಈ ಚಟ್ನಿ ಉತ್ತಮ ರುಚಿ ನೀಡುತ್ತದೆ.

ಬೇಕಾಗುವ ಸಾಮಗ್ರಿಗಳು

  • ಹಲಸಿನ ಕಾಯಿ – 8 ಎಸಳು
  • ಜೀರಿಗೆ – 1 ಚಮಚ
  • ಒಣ ಕೆಂಪು ಮೆಣಸು – 2
  • ಕಾಯಿತುರಿ – 4 ಚಮಚ
  • ಉಪ್ಪು – ರುಚಿಗೆ ತಕ್ಕಷ್ಟು

ಒಗ್ಗರಣೆಗೆ

  • ಎಣ್ಣೆ – 1 ಚಮಚ
  • ಸಾಸಿವೆ – ½ ಚಮಚ
  • ಕರಿಬೇವಿನ ಸೊಪ್ಪು – ಸ್ವಲ್ಪ

ಮಾಡುವ ವಿಧಾನ : ಮೊದಲು ಹಲಸಿನ ಕಾಯಿಯ ಎಸಳುಗಳನ್ನು ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಜಾರ್‌ಗೆ ಕಾಯಿತುರಿ, ಬೇಯಿಸಿದ ಹಲಸಿನ ಕಾಯಿ, ಸ್ವಲ್ಪ ಎಣ್ಣೆಯಲ್ಲಿ ಹುರಿದ ಜೀರಿಗೆ ಹಾಗೂ ಕೆಂಪು ಮೆಣಸು, ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.

ರುಬ್ಬಿದ ಮಿಶ್ರಣವನ್ನು ಒಂದು ಪಾತ್ರೆಗೆ ತೆಗೆದು, ಎಣ್ಣೆ ಬಿಸಿ ಮಾಡಿ ಸಾಸಿವೆ ಮತ್ತು ಕರಿಬೇವಿನ ಸೊಪ್ಪಿನ ಒಗ್ಗರಣೆ ನೀಡಿ. ಬಳಿಕ ಅದನ್ನು ಚಟ್ನಿಗೆ ಸೇರಿಸಿ ಚೆನ್ನಾಗಿ ಕಲಸಿದರೆ ರುಚಿಕರವಾದ ಹಲಸಿನ ಕಾಯಿ ಚಟ್ನಿ ಸಿದ್ಧ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit Chutney is a simple and delicious traditional recipe made using boiled jackfruit, coconut, cumin, and red chilies. It pairs well with hot rice, dosa, chapati, and porridge, offering a unique seasonal flavor.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

6 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

24 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago