ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

March 14, 2026
8:05 PM
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ ಸಾಮಗ್ರಿಗಳಲ್ಲಿ ಮನೆಯಲ್ಲೇ ರುಚಿಯಾಗಿ ಮಾಡಬಹುದು.

ಬೇಸಿಗೆ ಕಾಲದಲ್ಲಿ ದೊರೆಯುವ ಪೌಷ್ಟಿಕಾಂಶಯುತ ಹಲಸಿನ ಹಣ್ಣಿನಿಂದ ಸುಲಭವಾಗಿ ಮಾಡಬಹುದಾದ ರುಚಿಯಾದ ಡೆಸರ್ಟ್ ಎಂದರೆ ಹಲಸಿನ ಹಣ್ಣಿನ ಕಸ್ಟರ್ಡ್. ಮನೆಯಲ್ಲೇ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಈ ಸಿಹಿ ತಿಂಡಿ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ.

ಬೇಕಾಗುವ ಸಾಮಗ್ರಿಗಳು :

  • ಹಲಸಿನ ಹಣ್ಣು – 1 ಕಪ್ (ಚಿಕ್ಕದಾಗಿ ಕಟ್ ಮಾಡಿದ್ದು)

  • ಕಸ್ಟರ್ಡ್ ಪೌಡರ್ – 3 ಚಮಚ

  • ಹಾಲು – 2 ಕಪ್

  • ಸಕ್ಕರೆ – 3 ಚಮಚ

  • ಏಲಕ್ಕಿ ಪುಡಿ – ಸ್ವಲ್ಪ

  • ಗೋಡಂಬಿ – ಸ್ವಲ್ಪ

  • ಬಾದಾಮಿ – ಸ್ವಲ್ಪ

ಮಾಡುವ ವಿಧಾನ:  ಮೊದಲು ಒಂದು ಬೌಲ್‌ಗೆ ಕಸ್ಟರ್ಡ್ ಪೌಡರ್ ಹಾಗೂ ಸ್ವಲ್ಪ ಹಾಲು (ಸುಮಾರು 4 ಚಮಚ) ಹಾಕಿ ಗುಳ್ಳೆಯಾಗದಂತೆ ಚೆನ್ನಾಗಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ ಉಳಿದ ಹಾಲು ಮತ್ತು ಸಕ್ಕರೆ ಹಾಕಿ ಕುದಿಸಿ.  ಹಾಲು ಕುದಿಯಲು ಆರಂಭವಾದಾಗ ಏಲಕ್ಕಿ ಪುಡಿ ಮತ್ತು ಮಿಕ್ಸ್ ಮಾಡಿದ ಕಸ್ಟರ್ಡ್ ಪೌಡರ್ ಹಾಕಿ ನಿರಂತರವಾಗಿ ಕಲೆ ಹಾಕುತ್ತಾ ಸ್ವಲ್ಪ ಗಟ್ಟಿಯಾಗುವವರೆಗೆ ಬೇಯಿಸಿ.  ಬಳಿಕ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಮತ್ತು ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ವಲ್ಪ ತಣ್ಣಗಾದ ಬಳಿಕ ಫ್ರಿಜ್‌ನಲ್ಲಿ ಇಟ್ಟು ತಂಪಾಗಿ ಸವಿದರೆ ಇನ್ನೂ ರುಚಿಯಾಗಿರುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit custard is a simple and delicious summer dessert that can be prepared easily at home using ripe jackfruit, milk, custard powder, and dry fruits. It is nutritious, refreshing, and loved by all age groups.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror