Advertisement
ಅನುಕ್ರಮ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

Share

ಬೇಸಿಗೆ ಕಾಲದಲ್ಲಿ ದೊರೆಯುವ ಪೌಷ್ಟಿಕಾಂಶಯುತ ಹಲಸಿನ ಹಣ್ಣಿನಿಂದ ಸುಲಭವಾಗಿ ಮಾಡಬಹುದಾದ ರುಚಿಯಾದ ಡೆಸರ್ಟ್ ಎಂದರೆ ಹಲಸಿನ ಹಣ್ಣಿನ ಕಸ್ಟರ್ಡ್. ಮನೆಯಲ್ಲೇ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಈ ಸಿಹಿ ತಿಂಡಿ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ.

ಬೇಕಾಗುವ ಸಾಮಗ್ರಿಗಳು :

  • ಹಲಸಿನ ಹಣ್ಣು – 1 ಕಪ್ (ಚಿಕ್ಕದಾಗಿ ಕಟ್ ಮಾಡಿದ್ದು)

  • ಕಸ್ಟರ್ಡ್ ಪೌಡರ್ – 3 ಚಮಚ

  • ಹಾಲು – 2 ಕಪ್

  • ಸಕ್ಕರೆ – 3 ಚಮಚ

  • ಏಲಕ್ಕಿ ಪುಡಿ – ಸ್ವಲ್ಪ

  • ಗೋಡಂಬಿ – ಸ್ವಲ್ಪ

  • ಬಾದಾಮಿ – ಸ್ವಲ್ಪ

ಮಾಡುವ ವಿಧಾನ:  ಮೊದಲು ಒಂದು ಬೌಲ್‌ಗೆ ಕಸ್ಟರ್ಡ್ ಪೌಡರ್ ಹಾಗೂ ಸ್ವಲ್ಪ ಹಾಲು (ಸುಮಾರು 4 ಚಮಚ) ಹಾಕಿ ಗುಳ್ಳೆಯಾಗದಂತೆ ಚೆನ್ನಾಗಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ ಉಳಿದ ಹಾಲು ಮತ್ತು ಸಕ್ಕರೆ ಹಾಕಿ ಕುದಿಸಿ.  ಹಾಲು ಕುದಿಯಲು ಆರಂಭವಾದಾಗ ಏಲಕ್ಕಿ ಪುಡಿ ಮತ್ತು ಮಿಕ್ಸ್ ಮಾಡಿದ ಕಸ್ಟರ್ಡ್ ಪೌಡರ್ ಹಾಕಿ ನಿರಂತರವಾಗಿ ಕಲೆ ಹಾಕುತ್ತಾ ಸ್ವಲ್ಪ ಗಟ್ಟಿಯಾಗುವವರೆಗೆ ಬೇಯಿಸಿ.  ಬಳಿಕ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಮತ್ತು ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ವಲ್ಪ ತಣ್ಣಗಾದ ಬಳಿಕ ಫ್ರಿಜ್‌ನಲ್ಲಿ ಇಟ್ಟು ತಂಪಾಗಿ ಸವಿದರೆ ಇನ್ನೂ ರುಚಿಯಾಗಿರುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit custard is a simple and delicious summer dessert that can be prepared easily at home using ripe jackfruit, milk, custard powder, and dry fruits. It is nutritious, refreshing, and loved by all age groups.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

7 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

14 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

14 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

14 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

23 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

23 hours ago