Advertisement
ಅನುಕ್ರಮ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

Share

ಬೇಸಿಗೆ ಕಾಲದಲ್ಲಿ ದೊರೆಯುವ ಪೌಷ್ಟಿಕಾಂಶಯುತ ಹಲಸಿನ ಹಣ್ಣಿನಿಂದ ಸುಲಭವಾಗಿ ಮಾಡಬಹುದಾದ ರುಚಿಯಾದ ಡೆಸರ್ಟ್ ಎಂದರೆ ಹಲಸಿನ ಹಣ್ಣಿನ ಕಸ್ಟರ್ಡ್. ಮನೆಯಲ್ಲೇ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಈ ಸಿಹಿ ತಿಂಡಿ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ.

ಬೇಕಾಗುವ ಸಾಮಗ್ರಿಗಳು :

  • ಹಲಸಿನ ಹಣ್ಣು – 1 ಕಪ್ (ಚಿಕ್ಕದಾಗಿ ಕಟ್ ಮಾಡಿದ್ದು)

  • ಕಸ್ಟರ್ಡ್ ಪೌಡರ್ – 3 ಚಮಚ

  • ಹಾಲು – 2 ಕಪ್

  • ಸಕ್ಕರೆ – 3 ಚಮಚ

  • ಏಲಕ್ಕಿ ಪುಡಿ – ಸ್ವಲ್ಪ

  • ಗೋಡಂಬಿ – ಸ್ವಲ್ಪ

  • ಬಾದಾಮಿ – ಸ್ವಲ್ಪ

ಮಾಡುವ ವಿಧಾನ:  ಮೊದಲು ಒಂದು ಬೌಲ್‌ಗೆ ಕಸ್ಟರ್ಡ್ ಪೌಡರ್ ಹಾಗೂ ಸ್ವಲ್ಪ ಹಾಲು (ಸುಮಾರು 4 ಚಮಚ) ಹಾಕಿ ಗುಳ್ಳೆಯಾಗದಂತೆ ಚೆನ್ನಾಗಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ ಉಳಿದ ಹಾಲು ಮತ್ತು ಸಕ್ಕರೆ ಹಾಕಿ ಕುದಿಸಿ.  ಹಾಲು ಕುದಿಯಲು ಆರಂಭವಾದಾಗ ಏಲಕ್ಕಿ ಪುಡಿ ಮತ್ತು ಮಿಕ್ಸ್ ಮಾಡಿದ ಕಸ್ಟರ್ಡ್ ಪೌಡರ್ ಹಾಕಿ ನಿರಂತರವಾಗಿ ಕಲೆ ಹಾಕುತ್ತಾ ಸ್ವಲ್ಪ ಗಟ್ಟಿಯಾಗುವವರೆಗೆ ಬೇಯಿಸಿ.  ಬಳಿಕ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಮತ್ತು ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ವಲ್ಪ ತಣ್ಣಗಾದ ಬಳಿಕ ಫ್ರಿಜ್‌ನಲ್ಲಿ ಇಟ್ಟು ತಂಪಾಗಿ ಸವಿದರೆ ಇನ್ನೂ ರುಚಿಯಾಗಿರುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit custard is a simple and delicious summer dessert that can be prepared easily at home using ripe jackfruit, milk, custard powder, and dry fruits. It is nutritious, refreshing, and loved by all age groups.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

3 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

4 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

19 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago