Advertisement
ಅನುಕ್ರಮ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

Share

ಬೇಸಿಗೆ ಕಾಲದಲ್ಲಿ ದೊರೆಯುವ ಪೌಷ್ಟಿಕಾಂಶಯುತ ಹಲಸಿನ ಹಣ್ಣಿನಿಂದ ಸುಲಭವಾಗಿ ಮಾಡಬಹುದಾದ ರುಚಿಯಾದ ಡೆಸರ್ಟ್ ಎಂದರೆ ಹಲಸಿನ ಹಣ್ಣಿನ ಕಸ್ಟರ್ಡ್. ಮನೆಯಲ್ಲೇ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಈ ಸಿಹಿ ತಿಂಡಿ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ.

ಬೇಕಾಗುವ ಸಾಮಗ್ರಿಗಳು :

  • ಹಲಸಿನ ಹಣ್ಣು – 1 ಕಪ್ (ಚಿಕ್ಕದಾಗಿ ಕಟ್ ಮಾಡಿದ್ದು)

  • ಕಸ್ಟರ್ಡ್ ಪೌಡರ್ – 3 ಚಮಚ

  • ಹಾಲು – 2 ಕಪ್

  • ಸಕ್ಕರೆ – 3 ಚಮಚ

  • ಏಲಕ್ಕಿ ಪುಡಿ – ಸ್ವಲ್ಪ

  • ಗೋಡಂಬಿ – ಸ್ವಲ್ಪ

  • ಬಾದಾಮಿ – ಸ್ವಲ್ಪ

ಮಾಡುವ ವಿಧಾನ:  ಮೊದಲು ಒಂದು ಬೌಲ್‌ಗೆ ಕಸ್ಟರ್ಡ್ ಪೌಡರ್ ಹಾಗೂ ಸ್ವಲ್ಪ ಹಾಲು (ಸುಮಾರು 4 ಚಮಚ) ಹಾಕಿ ಗುಳ್ಳೆಯಾಗದಂತೆ ಚೆನ್ನಾಗಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ ಉಳಿದ ಹಾಲು ಮತ್ತು ಸಕ್ಕರೆ ಹಾಕಿ ಕುದಿಸಿ.  ಹಾಲು ಕುದಿಯಲು ಆರಂಭವಾದಾಗ ಏಲಕ್ಕಿ ಪುಡಿ ಮತ್ತು ಮಿಕ್ಸ್ ಮಾಡಿದ ಕಸ್ಟರ್ಡ್ ಪೌಡರ್ ಹಾಕಿ ನಿರಂತರವಾಗಿ ಕಲೆ ಹಾಕುತ್ತಾ ಸ್ವಲ್ಪ ಗಟ್ಟಿಯಾಗುವವರೆಗೆ ಬೇಯಿಸಿ.  ಬಳಿಕ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಮತ್ತು ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ವಲ್ಪ ತಣ್ಣಗಾದ ಬಳಿಕ ಫ್ರಿಜ್‌ನಲ್ಲಿ ಇಟ್ಟು ತಂಪಾಗಿ ಸವಿದರೆ ಇನ್ನೂ ರುಚಿಯಾಗಿರುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit custard is a simple and delicious summer dessert that can be prepared easily at home using ripe jackfruit, milk, custard powder, and dry fruits. It is nutritious, refreshing, and loved by all age groups.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago