Advertisement
ಅನುಕ್ರಮ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

Share

ಬೇಸಿಗೆ ಕಾಲದಲ್ಲಿ ದೊರೆಯುವ ಪೌಷ್ಟಿಕಾಂಶಯುತ ಹಲಸಿನ ಹಣ್ಣಿನಿಂದ ಸುಲಭವಾಗಿ ಮಾಡಬಹುದಾದ ರುಚಿಯಾದ ಡೆಸರ್ಟ್ ಎಂದರೆ ಹಲಸಿನ ಹಣ್ಣಿನ ಕಸ್ಟರ್ಡ್. ಮನೆಯಲ್ಲೇ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಈ ಸಿಹಿ ತಿಂಡಿ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ.

ಬೇಕಾಗುವ ಸಾಮಗ್ರಿಗಳು :

  • ಹಲಸಿನ ಹಣ್ಣು – 1 ಕಪ್ (ಚಿಕ್ಕದಾಗಿ ಕಟ್ ಮಾಡಿದ್ದು)

  • ಕಸ್ಟರ್ಡ್ ಪೌಡರ್ – 3 ಚಮಚ

  • ಹಾಲು – 2 ಕಪ್

  • ಸಕ್ಕರೆ – 3 ಚಮಚ

  • ಏಲಕ್ಕಿ ಪುಡಿ – ಸ್ವಲ್ಪ

  • ಗೋಡಂಬಿ – ಸ್ವಲ್ಪ

  • ಬಾದಾಮಿ – ಸ್ವಲ್ಪ

ಮಾಡುವ ವಿಧಾನ:  ಮೊದಲು ಒಂದು ಬೌಲ್‌ಗೆ ಕಸ್ಟರ್ಡ್ ಪೌಡರ್ ಹಾಗೂ ಸ್ವಲ್ಪ ಹಾಲು (ಸುಮಾರು 4 ಚಮಚ) ಹಾಕಿ ಗುಳ್ಳೆಯಾಗದಂತೆ ಚೆನ್ನಾಗಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ ಉಳಿದ ಹಾಲು ಮತ್ತು ಸಕ್ಕರೆ ಹಾಕಿ ಕುದಿಸಿ.  ಹಾಲು ಕುದಿಯಲು ಆರಂಭವಾದಾಗ ಏಲಕ್ಕಿ ಪುಡಿ ಮತ್ತು ಮಿಕ್ಸ್ ಮಾಡಿದ ಕಸ್ಟರ್ಡ್ ಪೌಡರ್ ಹಾಕಿ ನಿರಂತರವಾಗಿ ಕಲೆ ಹಾಕುತ್ತಾ ಸ್ವಲ್ಪ ಗಟ್ಟಿಯಾಗುವವರೆಗೆ ಬೇಯಿಸಿ.  ಬಳಿಕ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಮತ್ತು ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ವಲ್ಪ ತಣ್ಣಗಾದ ಬಳಿಕ ಫ್ರಿಜ್‌ನಲ್ಲಿ ಇಟ್ಟು ತಂಪಾಗಿ ಸವಿದರೆ ಇನ್ನೂ ರುಚಿಯಾಗಿರುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit custard is a simple and delicious summer dessert that can be prepared easily at home using ripe jackfruit, milk, custard powder, and dry fruits. It is nutritious, refreshing, and loved by all age groups.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

14 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

19 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago