Advertisement
ಅನುಕ್ರಮ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

Share

ಬೇಸಿಗೆ ಕಾಲದಲ್ಲಿ ದೊರೆಯುವ ಪೌಷ್ಟಿಕಾಂಶಯುತ ಹಲಸಿನ ಹಣ್ಣಿನಿಂದ ಸುಲಭವಾಗಿ ಮಾಡಬಹುದಾದ ರುಚಿಯಾದ ಡೆಸರ್ಟ್ ಎಂದರೆ ಹಲಸಿನ ಹಣ್ಣಿನ ಕಸ್ಟರ್ಡ್. ಮನೆಯಲ್ಲೇ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಈ ಸಿಹಿ ತಿಂಡಿ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ.

ಬೇಕಾಗುವ ಸಾಮಗ್ರಿಗಳು :

  • ಹಲಸಿನ ಹಣ್ಣು – 1 ಕಪ್ (ಚಿಕ್ಕದಾಗಿ ಕಟ್ ಮಾಡಿದ್ದು)

  • ಕಸ್ಟರ್ಡ್ ಪೌಡರ್ – 3 ಚಮಚ

  • ಹಾಲು – 2 ಕಪ್

  • ಸಕ್ಕರೆ – 3 ಚಮಚ

  • ಏಲಕ್ಕಿ ಪುಡಿ – ಸ್ವಲ್ಪ

  • ಗೋಡಂಬಿ – ಸ್ವಲ್ಪ

  • ಬಾದಾಮಿ – ಸ್ವಲ್ಪ

ಮಾಡುವ ವಿಧಾನ:  ಮೊದಲು ಒಂದು ಬೌಲ್‌ಗೆ ಕಸ್ಟರ್ಡ್ ಪೌಡರ್ ಹಾಗೂ ಸ್ವಲ್ಪ ಹಾಲು (ಸುಮಾರು 4 ಚಮಚ) ಹಾಕಿ ಗುಳ್ಳೆಯಾಗದಂತೆ ಚೆನ್ನಾಗಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ ಉಳಿದ ಹಾಲು ಮತ್ತು ಸಕ್ಕರೆ ಹಾಕಿ ಕುದಿಸಿ.  ಹಾಲು ಕುದಿಯಲು ಆರಂಭವಾದಾಗ ಏಲಕ್ಕಿ ಪುಡಿ ಮತ್ತು ಮಿಕ್ಸ್ ಮಾಡಿದ ಕಸ್ಟರ್ಡ್ ಪೌಡರ್ ಹಾಕಿ ನಿರಂತರವಾಗಿ ಕಲೆ ಹಾಕುತ್ತಾ ಸ್ವಲ್ಪ ಗಟ್ಟಿಯಾಗುವವರೆಗೆ ಬೇಯಿಸಿ.  ಬಳಿಕ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಮತ್ತು ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ವಲ್ಪ ತಣ್ಣಗಾದ ಬಳಿಕ ಫ್ರಿಜ್‌ನಲ್ಲಿ ಇಟ್ಟು ತಂಪಾಗಿ ಸವಿದರೆ ಇನ್ನೂ ರುಚಿಯಾಗಿರುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit custard is a simple and delicious summer dessert that can be prepared easily at home using ripe jackfruit, milk, custard powder, and dry fruits. It is nutritious, refreshing, and loved by all age groups.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago