Advertisement
ಸುದ್ದಿಗಳು

#JackfruitFestival | ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲಸಿನ ಹಬ್ಬ | ತರಹೇವಾರಿ ಖಾದ್ಯ ಸವಿದ ಜನ

Share

ಮಳೆಗಾಲ ಆರಂಭವಾಗುತ್ತಿದ್ದಂತೆ ಹಲಸಿನ ಮೇಳಗಳದ್ದೇ ಹಬ್ಬ. ಇತ್ತೀಚೆಗೆ ನಮ್ಮ ಪುತ್ತೂರಿನಲ್ಲಿ ಬಹಳ ವಿಜೃಂಭಣೆಯಿಂದ ನಡೆದಿತ್ತು. ಮಂಗಳೂರಿನಲ್ಲಿಯೂ ನಡೆಯುತ್ತಿದೆ. ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಹಲಸಿನ ಮೇಳವನ್ನು ಸಹಜ ಸಮೃದ್ಧಿ ವತಿಯಿಂದ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ  “ಮೈಸೂರು ಹಲಸಿನ ಹಬ್ಬ”ವನ್ನು ಆಯೋಜಿಸಲಾಗಿದೆ. ಈ ಹಬ್ಬ ಶನಿವಾರ ಉದ್ಘಾಟನೆ ಗೊಂಡಿದ್ದು, ಭಾನುವಾರ ಕೂಡ ಮುಂದುವರೆದಿದೆ.  ಹಲಸು ಕೊಳ್ಳಲು ಈಗಾಗಲೇ ಜನರು ಸರದಿ ಸಾಲಿನಲ್ಲಿ ನಿಂತಿದ್ದಾರೆ.

Advertisement
Advertisement

ಹಲಸು ಮೇಳದಲ್ಲಿ ತರಹೇವಾರಿ ಹಣ್ಣಿನ ಜೊತೆಗೆ ಮಾರಾಟ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಖಾದ್ಯಗಳು ಹಾಗೂ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 2-12 ವಯಸ್ಸಿನ ಮಕ್ಕಳಿಗೆ “ನಾ ಕಂಡಂತೆ ಹಲಸು” ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಲಾಗಿದೆ. ಇನ್ನು ಮಧ್ಯಾಹ್ನ ಹಲಸಿನ ಅಡುಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಹಲಸಿನ ಹಣ್ಣು, ಕಾಯಿ, ಬೀಜ, ಎಲೆಯಿಂದ ಮಾಡುವ ಸಾಂಪ್ರದಾಯಿಕ ಅಥವಾ ಹೊಸ ಬಗೆಯ ಅಡುಗೆಗಳನ್ನು ತಯಾರಿಸಿ ಮೇಳಕ್ಕೆ ತರಬಹುದು. ಉತ್ತಮ ಅಡುಗೆಗಳಿಗೆ ಆಕರ್ಷಕ ಬಹುಮಾನವನ್ನು ಇಡಲಾಗಿದೆ. 2 ಗಂಟೆಗೆ “ಹಲಸಿನ ಹಣ್ಣು ತಿನ್ನುವ ಸ್ಪರ್ಧೆ” ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ನಿಗದಿತ ಸಮಯದಲ್ಲಿ ಹೆಚ್ಚು ಹಲಸಿನ ಹಣ್ಣಿನ ತೊಳೆ ತಿಂದವರನ್ನು ವಿಜೇತರಾಗಿ ಘೋಷಿಸಿ, ಬಹುಮಾನವನ್ನು ಕೂಡ ನೀಡಲಾಗುತ್ತದೆ.

Advertisement

ಇನ್ನು ನಿನ್ನೆ ಮೇಳದಲ್ಲಿ ಕೆಂಪು, ಹಳದಿ ಮತ್ತು ಬಿಳಿ ಹಲಸಿನ ಹಣ್ಣುಗಳು ಜನರನ್ನು ತನ್ನತ್ತ ಆಕರ್ಷಿಸಿದವು. ಜೊತೆಗೆ ಹಲಸಿನ ಐಸ್ ಕ್ರೀಂ, ಚಿಪ್ಸ್‌, ಕಬಾಬ್, ಚಾಕೋಲೇಟ್, ಹಪ್ಪಳ, ಹಲ್ವಾ, ಹೋಳಿಗೆ, ವಡೆ, ದೋಸೆ, ಹಲಸಿನ ಬಿರಿಯಾನಿ ರುಚಿಯನ್ನು ಸಾರ್ವಜನಿಕರು ಸವಿದರು. ಅಲ್ಲದೆ ಹಲಸಿನ ಬೀಜದ ಪೇಯ ಕಾಫಿಗೆ ಜನರು ಮುಗಿಬಿದ್ದಿದ್ದರು. ಹಸಿದು ಹಲಸು ತಿನ್ನುವ ಎಂಬ ಮಾತಿದೆ. ಹಾಗೆಯೇ ಬರಗಾಲ ಎದುರಿಸಿ ನಿಲ್ಲುವ ಹಲಸು ರಾಸಾಯನಿಕ ಔಷಧಿ, ಗೊಬ್ಬರ ಇಲ್ಲದೆ ಬೆಳೆಯುತ್ತದೆ. ರೈತರ ಜೇಬು ತುಂಬುವ ಆಪ್ತಮಿತ್ರನೂ ಹೌದು. ಹಲಸಿನ ಮಹತ್ವವನ್ನು ಗ್ರಾಹಕರಿಗೆ ಮತ್ತು ರೈತರಿಗೆ ತಿಳಿಸಿಕೊಡುವ ಉದ್ದೇಶದಿಂದ ಸಹಜ ಸಮೃದ್ಧ ಮತ್ತು ನಮ್ಮ ರೈತರ ಮಾರ್ಕೆಟ್ ಜೊತೆಗೂಡಿ ಎರಡು ದಿನ ಹಲಸಿನ ಹಬ್ಬವನ್ನು ಏರ್ಪಡಿಸಿದೆ.

Advertisement

ಇನ್ನು ಮೊದಲ ದಿನದ (ಶನಿವಾರ) ಹಲಸಿನ ಹಬ್ಬವನ್ನು ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ.ಸಂಜಯ್‌ ಕುಮಾರ್ ಸಿಂಗ್ “ಹಲಸಿನ ಅಡುಗೆ” ಪುಸ್ತಕವನ್ನು ಬಿಡುಗಡೆ ಮಾಡಿದರು.  ಡಾ. ಕರುಣಾಕರನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ನಾನಾ ಸ್ಪರ್ಧೆಗಳ ಆಯೋಜನೆ ಜೊತೆಗೆ ಹಲಸು ಭಾರ ಎತ್ತುವ ಮತ್ತು ಹಲಸಿನ ತೂಕ ಊಹಿಸಿಸುವ ಸ್ಪರ್ಧೆಯನ್ನೂ ಕೂಡ ಏರ್ಪಡಿಸಲಾಗಿತ್ತು.ಕರ್ನಾಟಕದ ವಿವಿಧ ಭಾಗಗಳಿಂದ ಬರುವ 40 ಗ್ರಾಮೀಣ ಉದ್ದಿಮೆದಾರರು, ರೈತ ಕಂಪನಿಗಳು, ರೈತ ಮತ್ತು ಮಹಿಳಾ ಗುಂಪುಗಳು ಹಲಸಿನ ಮೌಲ್ಯವರ್ಧಿತ ಪದಾರ್ಥಗಳು, ಸಿರಿಧಾನ್ಯ, ಸಾವಯವ ಉತ್ಪನ್ನಗಳು ಮತ್ತು ಕರಕುಶಲ ವಸ್ತುಗಳನ್ನು ಮಾರಾಟಕ್ಕೆ ಇಡಲಾಗಿತ್ತು. ರುದ್ರಾಕ್ಷಿ ಬಕ್ಕೆ, ತೂಬಗೆರೆ, ಬೈರಸಂದ್ರ, ಸರ್ವ ಋತು, ಲಾಲ್‌ಬಾಗ್ ಮಧುರ, ಥಾಯ್ ರೆಡ್, ವಿಯಟ್ನಾಂ ಸೂಪರ್ ಹರ್ಲಿ, ಗಮ್ ಲೆಸ್, ನಾಗಚಂದ್ರ, ರಾಮಚಂದ್ರ ಮೊದಲಾದ ಇಪ್ಪತ್ತೈದು ತಳಿಗಳು ಮಾರಾಟಕ್ಕೆ ಇಡಲಾಗಿದೆ.

Advertisement

ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕು ಪ್ರಾಧಿಕಾರದಲ್ಲಿ ನೋಂದಣಿ ಆಗಿರುವ ಕರ್ನಾಟಕ ರಾಜ್ಯದ ಮೊದಲ ಕೆಂಪು ಹಲಸಿನ ತಳಿ ಸಿದ್ದು ಹಲಸು ಗಿಡಗಳು ಆಕರ್ಷಣೀಯ ಕೇಂದ್ರ ಬಿಂದುವಾಗಿದ್ದವು.  ಹಲಸಿನ ಕಾಯಿಯ ನಿರಂತರ ಸೇವನೆಯಿಂದ ಮಧುಮೇಹಿಗಳು ಇನ್ಸುಲಿನ್ ಬಳಕೆ ನಿಲ್ಲಿಸಬಹುದು. ಕ್ಯಾನ್ಸರ್, ಮಲಬದ್ದತೆಯನ್ನು ದೂರವಿಡಬಹುದು. ಹೀಗೆ ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಹಲಸನ್ನು ಮನೆ ಮಂದಿಯೆಲ್ಲಾ ತಿನ್ನಬಹುದು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

5 mins ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

24 mins ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

17 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

18 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

18 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

18 hours ago