Advertisement
Opinion

ಮೈದಾಕ್ಕೆ ಪರ್ಯಾಯ ಹಿಟ್ಟು ಯಾವುದಿದೆ…? | ಬಾ ಕಾ ಹು ನಂತರ ಹ ಬೀ ಹು ಪ್ರಯೋಗ |

Share

ಕಳೆದ ಮೂರು – ನಾಲ್ಕು ವರ್ಷಗಳಿಂದ ಮೈದಾ ಹುಡಿಗೆ ಪರ್ಯಾಯವಾಗಿ ಬಾಳೆಕಾಯಿಯ ಹುಡಿಯನ್ನು ಅಂದರೆ ಬಾಕಾಹು ಬಳಸುವ ಬಗ್ಗೆ ಅನೇಕ ಪ್ರಯೋಗಗಳು ಕೇರಳ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡದ ಕೆಲವೆಡೆ ನಡೆದಿದೆ.  ಅದೇ ರೀತಿ ಹಲಸಿನ ಬೀಜವನ್ನು ಹುಡಿ ಮಾಡಿ ಮೈದಕ್ಕೆ ಪರ್ಯಾಯಾವಾಗಿ ಬಳಸುವ ಪ್ರಯೋಗಳು ನಡೆಯುತ್ತಿವೆ. ಇತ್ತೀಚೆಗೆ ಹಲಸಿನ ಬೆಳೆಯನ್ನು ವಾಣಿಜ್ಯ ಬೆಳೆಯಾಗಿ ಬೆಳೆಯಲು ಹಲವು ಪ್ರಯತ್ನಗಳೂ ನಡೆಯುತ್ತಿವೆ. 

ಇದೀಗ ಶಿರಸಿಯಲ್ಲಿ ಹಬೀಹು ಅಂದರೆ ಹಲಸಿನ ಬೀಜದ ಹುಡಿಯಿಂದ ಒಂದಷ್ಟು ಪ್ರಯೋಗಗಳನ್ನು ಮಹಿಳೆಯೊಬ್ಬರು ಮಾಡಿ ಯಶಸ್ವಿಯಾಗಿದ್ದಾರೆ.  ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಆಶೀಸರದ ಮಹಿಳೆಯೊಬ್ಬರು ಹಲಸಿನ ಬೇಳೆಯಿಂದ (Jackfruit Seed) ಹುಡಿ, ರವೆಯನ್ನು ತಯಾರಿಸುತ್ತಿದ್ದಾರೆ.

ಆಶೀಸರದ ಅರುಣಾ ಹೆಗಡೆ ಅವರು ಕಳೆದ 10 ವರ್ಷದಿಂದ ಹಲಸಿನ ತಿನಿಸು ಮಾಡುವಲ್ಲಿ ಸಿದ್ಧಹಸ್ತರು. ಕಳೆದ ವರ್ಷ ಅವರಿಗೆ ಈ ಉಪಾಯ ಬಂದಿತ್ತು. ಹೀಗಾಗಿ ಹಲಸಿನ ಬೇಳೆಯನ್ನು ಮೊದಲು ಬೇಯಿಸಿಕೊಂಡು ನಂತರ ಒಣಗಿಸಿ ಅದನ್ನು ನುರಿದುಕೊಂಡು ಮಿಕ್ಸಿ ಮಾಡಿಕೊಂಡರು. ಇವರು ಎಂಟು ರೌಂಡ್ ಮಿಕ್ಸಿ ಮಾಡಿದ ನಂತರ ಅದರಲ್ಲಿ ಜಿನುಗು ರವೆ, ದಪ್ಪ ರವೆ, ಕೊನೆಯ ಪ್ರಾಡಕ್ಟ್ ಆಗಿ ಹಿಟ್ಟು ದೊರೆಯಿತು. ಆ ಹಿಟ್ಟಿನಿಂದ ಶಂಕರಪೋಳಿಯಂತಹ ಖಾದ್ಯಗಳನ್ನು ಇವರು ತಯಾರಿಸಿದ್ದಾರೆ.

ಈ ಹಿಟ್ಟು ಮೈದಾದ ಹಾಗೆ ಅಲ್ಲ ಇದು ಬೇಗ ಕರಗುತ್ತದೆ. ಹೀಗಾಗಿ ಇದನ್ನು ಒಮ್ಮೆ ಹಲಸಿನ ಸೀಸನ್ ಅಲ್ಲಿ ಸಂಸ್ಕರಿಸಿ ಇಟ್ಟುಕೊಂಡರೆ, ನಮಗೆ ಬೇಕಾದ ತಿಂಡಿಗಳನ್ನು ಹಲಸಿನ ಬೇಳೆಯ ಹುಡಿ ಅಥವಾ ಹಿಟ್ಟಿನಲ್ಲಿಯೇ ಮಾಡಬಹುದು.‌ ಅಂತೆಯೇ ಹಲಸಿನ ರವೆಯನ್ನೂ ಸಹ ಉಪ್ಪಿಟಿಗೆ, ಶೀರಾಕ್ಕೆ ಬಳಸಬಹುದಾಗಿದೆ. ಹೋಳಿಗೆ ಮಾಡಲು ಚಿರೋಟಿ ರವಾ ಅನ್ನೂ ಕೂಡ ಹಲಸಿನ ಬೇಳೆ ಹುಡಿಯಿಂದಲೇ ಮಾಡಿಕೊಳ್ಳಬಹುದು. ದೊಡ್ಡ ಪ್ರಮಾಣದಲ್ಲಿ ಇದಕ್ಕೊಂದು ಮಾರ್ಕೆಟ್ ಸಿಕ್ಕರೆ ಒಳ್ಳೆಯ ಗೃಹೋದ್ಯಮವಾಗಬಹುದು. ಅರುಣಾ ಹೆಗಡೆಯವರು ಪ್ರಯೋಗವಾಗಿ ಇದನ್ನು ಮಾಡಿದ್ದಾರೆ, ಹಲಸು ಬೆಳೆಗಾರರು ಇದನ್ನು ಪ್ರಾಯೋಗಿಕವಾಗಿ ಒಮ್ಮೆ ಮಾಡಬಹುದಾಗಿದೆ.

  • ಅಂತರ್ಜಾಲ ಮಾಹಿತಿ

The trend of using jackfruit seed flour as a substitute for all-purpose flour like maida is gaining popularity after ba ka hu. However, important considerations need to be taken into account before making this substitution.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

12 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago