Advertisement
Opinion

ಮೈದಾಕ್ಕೆ ಪರ್ಯಾಯ ಹಿಟ್ಟು ಯಾವುದಿದೆ…? | ಬಾ ಕಾ ಹು ನಂತರ ಹ ಬೀ ಹು ಪ್ರಯೋಗ |

Share

ಕಳೆದ ಮೂರು – ನಾಲ್ಕು ವರ್ಷಗಳಿಂದ ಮೈದಾ ಹುಡಿಗೆ ಪರ್ಯಾಯವಾಗಿ ಬಾಳೆಕಾಯಿಯ ಹುಡಿಯನ್ನು ಅಂದರೆ ಬಾಕಾಹು ಬಳಸುವ ಬಗ್ಗೆ ಅನೇಕ ಪ್ರಯೋಗಗಳು ಕೇರಳ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡದ ಕೆಲವೆಡೆ ನಡೆದಿದೆ.  ಅದೇ ರೀತಿ ಹಲಸಿನ ಬೀಜವನ್ನು ಹುಡಿ ಮಾಡಿ ಮೈದಕ್ಕೆ ಪರ್ಯಾಯಾವಾಗಿ ಬಳಸುವ ಪ್ರಯೋಗಳು ನಡೆಯುತ್ತಿವೆ. ಇತ್ತೀಚೆಗೆ ಹಲಸಿನ ಬೆಳೆಯನ್ನು ವಾಣಿಜ್ಯ ಬೆಳೆಯಾಗಿ ಬೆಳೆಯಲು ಹಲವು ಪ್ರಯತ್ನಗಳೂ ನಡೆಯುತ್ತಿವೆ. 

Advertisement
Advertisement

ಇದೀಗ ಶಿರಸಿಯಲ್ಲಿ ಹಬೀಹು ಅಂದರೆ ಹಲಸಿನ ಬೀಜದ ಹುಡಿಯಿಂದ ಒಂದಷ್ಟು ಪ್ರಯೋಗಗಳನ್ನು ಮಹಿಳೆಯೊಬ್ಬರು ಮಾಡಿ ಯಶಸ್ವಿಯಾಗಿದ್ದಾರೆ.  ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಆಶೀಸರದ ಮಹಿಳೆಯೊಬ್ಬರು ಹಲಸಿನ ಬೇಳೆಯಿಂದ (Jackfruit Seed) ಹುಡಿ, ರವೆಯನ್ನು ತಯಾರಿಸುತ್ತಿದ್ದಾರೆ.

Advertisement

ಆಶೀಸರದ ಅರುಣಾ ಹೆಗಡೆ ಅವರು ಕಳೆದ 10 ವರ್ಷದಿಂದ ಹಲಸಿನ ತಿನಿಸು ಮಾಡುವಲ್ಲಿ ಸಿದ್ಧಹಸ್ತರು. ಕಳೆದ ವರ್ಷ ಅವರಿಗೆ ಈ ಉಪಾಯ ಬಂದಿತ್ತು. ಹೀಗಾಗಿ ಹಲಸಿನ ಬೇಳೆಯನ್ನು ಮೊದಲು ಬೇಯಿಸಿಕೊಂಡು ನಂತರ ಒಣಗಿಸಿ ಅದನ್ನು ನುರಿದುಕೊಂಡು ಮಿಕ್ಸಿ ಮಾಡಿಕೊಂಡರು. ಇವರು ಎಂಟು ರೌಂಡ್ ಮಿಕ್ಸಿ ಮಾಡಿದ ನಂತರ ಅದರಲ್ಲಿ ಜಿನುಗು ರವೆ, ದಪ್ಪ ರವೆ, ಕೊನೆಯ ಪ್ರಾಡಕ್ಟ್ ಆಗಿ ಹಿಟ್ಟು ದೊರೆಯಿತು. ಆ ಹಿಟ್ಟಿನಿಂದ ಶಂಕರಪೋಳಿಯಂತಹ ಖಾದ್ಯಗಳನ್ನು ಇವರು ತಯಾರಿಸಿದ್ದಾರೆ.

ಈ ಹಿಟ್ಟು ಮೈದಾದ ಹಾಗೆ ಅಲ್ಲ ಇದು ಬೇಗ ಕರಗುತ್ತದೆ. ಹೀಗಾಗಿ ಇದನ್ನು ಒಮ್ಮೆ ಹಲಸಿನ ಸೀಸನ್ ಅಲ್ಲಿ ಸಂಸ್ಕರಿಸಿ ಇಟ್ಟುಕೊಂಡರೆ, ನಮಗೆ ಬೇಕಾದ ತಿಂಡಿಗಳನ್ನು ಹಲಸಿನ ಬೇಳೆಯ ಹುಡಿ ಅಥವಾ ಹಿಟ್ಟಿನಲ್ಲಿಯೇ ಮಾಡಬಹುದು.‌ ಅಂತೆಯೇ ಹಲಸಿನ ರವೆಯನ್ನೂ ಸಹ ಉಪ್ಪಿಟಿಗೆ, ಶೀರಾಕ್ಕೆ ಬಳಸಬಹುದಾಗಿದೆ. ಹೋಳಿಗೆ ಮಾಡಲು ಚಿರೋಟಿ ರವಾ ಅನ್ನೂ ಕೂಡ ಹಲಸಿನ ಬೇಳೆ ಹುಡಿಯಿಂದಲೇ ಮಾಡಿಕೊಳ್ಳಬಹುದು. ದೊಡ್ಡ ಪ್ರಮಾಣದಲ್ಲಿ ಇದಕ್ಕೊಂದು ಮಾರ್ಕೆಟ್ ಸಿಕ್ಕರೆ ಒಳ್ಳೆಯ ಗೃಹೋದ್ಯಮವಾಗಬಹುದು. ಅರುಣಾ ಹೆಗಡೆಯವರು ಪ್ರಯೋಗವಾಗಿ ಇದನ್ನು ಮಾಡಿದ್ದಾರೆ, ಹಲಸು ಬೆಳೆಗಾರರು ಇದನ್ನು ಪ್ರಾಯೋಗಿಕವಾಗಿ ಒಮ್ಮೆ ಮಾಡಬಹುದಾಗಿದೆ.

Advertisement
  • ಅಂತರ್ಜಾಲ ಮಾಹಿತಿ

The trend of using jackfruit seed flour as a substitute for all-purpose flour like maida is gaining popularity after ba ka hu. However, important considerations need to be taken into account before making this substitution.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-09-2024 | ಸೆ.21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸಾಧ್ಯತೆ |

16.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

14 seconds ago

ಕಿಸಾನ್‌ ಸಂಘದಿಂದ ಬಲರಾಮ ಜಯಂತಿ | ಕೃಷಿಯಲ್ಲಿ ಆದಾಯ ಹೆಚ್ಚಿಸುವತ್ತ ಚಿಂತನೆ ಅಗತ್ಯ |

ಭಾರತೀಯ ಕಿಸಾನ್‌ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ…

6 mins ago

ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಬದ್ಧವಾಗಿದೆ

ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಭಾರತವು ವಿಶ್ವದ ಅತಿದೊಡ್ಡ ಆಹಾರ ಆಧಾರಿತ…

1 day ago

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ಕೇಂದ್ರ ಸಚಿವ ಸಂಪುಟ ಅನುಮೋದನೆ

2024-25 ರಿಂದ 2028-29ರ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ…

1 day ago

ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ

ಹಬ್ಬದ ಸಮಯದಲ್ಲಿ ಕಲಬೆರಕೆ ಸಿಹಿತಿಂಡಿಗಳು ಮತ್ತು ಡೈರಿ ಉತ್ಪನ್ನಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು…

1 day ago

ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ

ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು…

2 days ago