Opinion

ಮೈದಾಕ್ಕೆ ಪರ್ಯಾಯ ಹಿಟ್ಟು ಯಾವುದಿದೆ…? | ಬಾ ಕಾ ಹು ನಂತರ ಹ ಬೀ ಹು ಪ್ರಯೋಗ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಮೂರು – ನಾಲ್ಕು ವರ್ಷಗಳಿಂದ ಮೈದಾ ಹುಡಿಗೆ ಪರ್ಯಾಯವಾಗಿ ಬಾಳೆಕಾಯಿಯ ಹುಡಿಯನ್ನು ಅಂದರೆ ಬಾಕಾಹು ಬಳಸುವ ಬಗ್ಗೆ ಅನೇಕ ಪ್ರಯೋಗಗಳು ಕೇರಳ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡದ ಕೆಲವೆಡೆ ನಡೆದಿದೆ.  ಅದೇ ರೀತಿ ಹಲಸಿನ ಬೀಜವನ್ನು ಹುಡಿ ಮಾಡಿ ಮೈದಕ್ಕೆ ಪರ್ಯಾಯಾವಾಗಿ ಬಳಸುವ ಪ್ರಯೋಗಳು ನಡೆಯುತ್ತಿವೆ. ಇತ್ತೀಚೆಗೆ ಹಲಸಿನ ಬೆಳೆಯನ್ನು ವಾಣಿಜ್ಯ ಬೆಳೆಯಾಗಿ ಬೆಳೆಯಲು ಹಲವು ಪ್ರಯತ್ನಗಳೂ ನಡೆಯುತ್ತಿವೆ. 

Advertisement

ಇದೀಗ ಶಿರಸಿಯಲ್ಲಿ ಹಬೀಹು ಅಂದರೆ ಹಲಸಿನ ಬೀಜದ ಹುಡಿಯಿಂದ ಒಂದಷ್ಟು ಪ್ರಯೋಗಗಳನ್ನು ಮಹಿಳೆಯೊಬ್ಬರು ಮಾಡಿ ಯಶಸ್ವಿಯಾಗಿದ್ದಾರೆ.  ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಆಶೀಸರದ ಮಹಿಳೆಯೊಬ್ಬರು ಹಲಸಿನ ಬೇಳೆಯಿಂದ (Jackfruit Seed) ಹುಡಿ, ರವೆಯನ್ನು ತಯಾರಿಸುತ್ತಿದ್ದಾರೆ.

ಆಶೀಸರದ ಅರುಣಾ ಹೆಗಡೆ ಅವರು ಕಳೆದ 10 ವರ್ಷದಿಂದ ಹಲಸಿನ ತಿನಿಸು ಮಾಡುವಲ್ಲಿ ಸಿದ್ಧಹಸ್ತರು. ಕಳೆದ ವರ್ಷ ಅವರಿಗೆ ಈ ಉಪಾಯ ಬಂದಿತ್ತು. ಹೀಗಾಗಿ ಹಲಸಿನ ಬೇಳೆಯನ್ನು ಮೊದಲು ಬೇಯಿಸಿಕೊಂಡು ನಂತರ ಒಣಗಿಸಿ ಅದನ್ನು ನುರಿದುಕೊಂಡು ಮಿಕ್ಸಿ ಮಾಡಿಕೊಂಡರು. ಇವರು ಎಂಟು ರೌಂಡ್ ಮಿಕ್ಸಿ ಮಾಡಿದ ನಂತರ ಅದರಲ್ಲಿ ಜಿನುಗು ರವೆ, ದಪ್ಪ ರವೆ, ಕೊನೆಯ ಪ್ರಾಡಕ್ಟ್ ಆಗಿ ಹಿಟ್ಟು ದೊರೆಯಿತು. ಆ ಹಿಟ್ಟಿನಿಂದ ಶಂಕರಪೋಳಿಯಂತಹ ಖಾದ್ಯಗಳನ್ನು ಇವರು ತಯಾರಿಸಿದ್ದಾರೆ.

ಈ ಹಿಟ್ಟು ಮೈದಾದ ಹಾಗೆ ಅಲ್ಲ ಇದು ಬೇಗ ಕರಗುತ್ತದೆ. ಹೀಗಾಗಿ ಇದನ್ನು ಒಮ್ಮೆ ಹಲಸಿನ ಸೀಸನ್ ಅಲ್ಲಿ ಸಂಸ್ಕರಿಸಿ ಇಟ್ಟುಕೊಂಡರೆ, ನಮಗೆ ಬೇಕಾದ ತಿಂಡಿಗಳನ್ನು ಹಲಸಿನ ಬೇಳೆಯ ಹುಡಿ ಅಥವಾ ಹಿಟ್ಟಿನಲ್ಲಿಯೇ ಮಾಡಬಹುದು.‌ ಅಂತೆಯೇ ಹಲಸಿನ ರವೆಯನ್ನೂ ಸಹ ಉಪ್ಪಿಟಿಗೆ, ಶೀರಾಕ್ಕೆ ಬಳಸಬಹುದಾಗಿದೆ. ಹೋಳಿಗೆ ಮಾಡಲು ಚಿರೋಟಿ ರವಾ ಅನ್ನೂ ಕೂಡ ಹಲಸಿನ ಬೇಳೆ ಹುಡಿಯಿಂದಲೇ ಮಾಡಿಕೊಳ್ಳಬಹುದು. ದೊಡ್ಡ ಪ್ರಮಾಣದಲ್ಲಿ ಇದಕ್ಕೊಂದು ಮಾರ್ಕೆಟ್ ಸಿಕ್ಕರೆ ಒಳ್ಳೆಯ ಗೃಹೋದ್ಯಮವಾಗಬಹುದು. ಅರುಣಾ ಹೆಗಡೆಯವರು ಪ್ರಯೋಗವಾಗಿ ಇದನ್ನು ಮಾಡಿದ್ದಾರೆ, ಹಲಸು ಬೆಳೆಗಾರರು ಇದನ್ನು ಪ್ರಾಯೋಗಿಕವಾಗಿ ಒಮ್ಮೆ ಮಾಡಬಹುದಾಗಿದೆ.

  • ಅಂತರ್ಜಾಲ ಮಾಹಿತಿ

The trend of using jackfruit seed flour as a substitute for all-purpose flour like maida is gaining popularity after ba ka hu. However, important considerations need to be taken into account before making this substitution.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

3 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

14 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

14 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

19 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

1 day ago