ಹಲಸಿನ ಬೀಜದ ಅಂಬೋಡೆಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 1.1/4 ಕಪ್, ಉದ್ದಿನ ಬೇಳೆ 6 ಚಮಚ (ನೆನೆ ಹಾಕಿ ಇಟ್ಟುಕೊಳ್ಳಿ.), ಶುಂಠಿ 1 ಇಂಚು, ಓಂ ಕಾಳು 1/2 ಚಮಚ, ಕರಿಬೇವಿನ ಸೊಪ್ಪು, ಕಾಯಿತುರಿ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ 2, ಕರಿಯಲು ಎಣ್ಣೆ.
ಮಾಡುವ ವಿಧಾನ: ಹಲಸಿನ ಬೀಜ ಜಜ್ಜಿ ಬೇಯಿಸಿ ಕೊಳ್ಳಿ. ಜಾರ್ ಗೆ ಬೇಯಿಸಿದ ಹಲಸಿನ ಬೀಜ ಹಸಿಮೆಣಸಿನ ಕಾಯಿ, ಶುಂಠಿ, ಉಪ್ಪು ರುಚಿಗೆ ತಕ್ಕಷ್ಟು, ತೊಳೆದು ಕೊಂಡ ಉದ್ದಿನ ಬೇಳೆ,ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ ಕರಿಬೇವಿನ ಸೊಪ್ಪು, ಓಂ ಕಾಳು, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಾದ ಎಣ್ಣೆಯಲ್ಲಿ ಸ್ವಲ್ಪ ಸ್ವಲ್ಪ ಹಾಕಿ ಕೆಂಪಗೆ ಕರಿದು ತೆಗೆಯಿರಿ. ನಿಮಗೆ ಇಷ್ಟವಾದ ಚಟ್ನಿ, ಸಾಂಬಾರ್ ಜೊತೆ ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…