ಹಲಸಿನ ಬೀಜದ ಅಂಬೋಡೆಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 1.1/4 ಕಪ್, ಉದ್ದಿನ ಬೇಳೆ 6 ಚಮಚ (ನೆನೆ ಹಾಕಿ ಇಟ್ಟುಕೊಳ್ಳಿ.), ಶುಂಠಿ 1 ಇಂಚು, ಓಂ ಕಾಳು 1/2 ಚಮಚ, ಕರಿಬೇವಿನ ಸೊಪ್ಪು, ಕಾಯಿತುರಿ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ 2, ಕರಿಯಲು ಎಣ್ಣೆ.
ಮಾಡುವ ವಿಧಾನ: ಹಲಸಿನ ಬೀಜ ಜಜ್ಜಿ ಬೇಯಿಸಿ ಕೊಳ್ಳಿ. ಜಾರ್ ಗೆ ಬೇಯಿಸಿದ ಹಲಸಿನ ಬೀಜ ಹಸಿಮೆಣಸಿನ ಕಾಯಿ, ಶುಂಠಿ, ಉಪ್ಪು ರುಚಿಗೆ ತಕ್ಕಷ್ಟು, ತೊಳೆದು ಕೊಂಡ ಉದ್ದಿನ ಬೇಳೆ,ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ ಕರಿಬೇವಿನ ಸೊಪ್ಪು, ಓಂ ಕಾಳು, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಾದ ಎಣ್ಣೆಯಲ್ಲಿ ಸ್ವಲ್ಪ ಸ್ವಲ್ಪ ಹಾಕಿ ಕೆಂಪಗೆ ಕರಿದು ತೆಗೆಯಿರಿ. ನಿಮಗೆ ಇಷ್ಟವಾದ ಚಟ್ನಿ, ಸಾಂಬಾರ್ ಜೊತೆ ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…