Advertisement
Share

ಹಲಸಿನ ಬೀಜ ಚನ್ನ ಬೋಂಡಾಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :

ಹಲಸಿನ ಬೀಜ 15, ಸಿಪ್ಪೆ ತೆಗೆದು ಜಜ್ಜಿ ಇಡಿ,  ಚನ್ನ 1/4 ಕಪ್. 3 ಗಂಟೆ ನೆನೆ ಹಾಕಿ, ಆಲೂಗಡ್ಡೆ 1 ಚಿಕ್ಕದು ಸಿಪ್ಪೆ ತೆಗೆದು ಕಟ್ ಮಾಡಿ. ಇವು 3 ನ್ನು ಕುಕ್ಕರ್ ಗೆ ಹಾಕಿ ನೀರು ಹಾಕಿ ಬೇಯಿಸಿ ಕೊಳ್ಳಿ. ತಣ್ಣಗಾದ ನಂತರ ನೀರು ತೆಗೆದು ಜಾರ್ ಗೆ ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ, ಉದ್ದಿನ ಬೇಳೆ 1/2ಚಮಚ, ಸಾಸಿವೆ 1/4ಚಮಚ, ಜೀರಿಗೆ 1 ಚಮಚ , ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಮಾಡಿಕೊಳ್ಳಿ. ನಂತರ ಕಟ್ ಮಾಡಿದ ಈರುಳ್ಳಿ 1, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸು 2 ಹಾಕಿ ಚೆನ್ನಾಗಿ ಫ್ರೈ ಮಾಡಿ ಇದಕ್ಕೆ ಬೇಯಿಸಿ ರುಬ್ಬಿದ ಮಿಶ್ರಣವನ್ನು ಹಾಕಿ , ಕೊತ್ತಂಬರಿ ಪುಡಿ , ಗರಂ ಮಸಾಲ 1 ಚಮಚ ,ಕೊತ್ತಂಬರಿ ಸೊಪ್ಪುಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

ನಿಂಬೆ ಗಾತ್ರದ ಉಂಡೆಗಳನ್ನು ಮಾಡಿ ಇಡಿ. ಹಿಟ್ಟು ಕಲೆಸಿ ಕೊಳ್ಳಲು. ಕಡಲೆ ಹಿಟ್ಟು 1 ಕಪ್, ನೀರು , ಉಪ್ಪು ರುಚಿಗೆ ತಕ್ಕಷ್ಟು ಹಾಕಿ ಹಿಟ್ಟು ಕಲೆಸಿ ಕೊಳ್ಳಿ.ಉಂಡೆಗಳನ್ನು ಹಿಟ್ಟಿಗೆ ಅದ್ದಿ , ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಹಲಸಿನ ಬೀಜ ಚನ್ನ ಬೋಂಡಾ ರೆಡಿ.
ಸಾಸ್ ಜೊತೆ ಸವಿಯಿರಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

18 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

19 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

19 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

22 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago