Advertisement
Share

ಹಲಸಿನ ಬೀಜ ಚನ್ನ ಬೋಂಡಾಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :

ಹಲಸಿನ ಬೀಜ 15, ಸಿಪ್ಪೆ ತೆಗೆದು ಜಜ್ಜಿ ಇಡಿ,  ಚನ್ನ 1/4 ಕಪ್. 3 ಗಂಟೆ ನೆನೆ ಹಾಕಿ, ಆಲೂಗಡ್ಡೆ 1 ಚಿಕ್ಕದು ಸಿಪ್ಪೆ ತೆಗೆದು ಕಟ್ ಮಾಡಿ. ಇವು 3 ನ್ನು ಕುಕ್ಕರ್ ಗೆ ಹಾಕಿ ನೀರು ಹಾಕಿ ಬೇಯಿಸಿ ಕೊಳ್ಳಿ. ತಣ್ಣಗಾದ ನಂತರ ನೀರು ತೆಗೆದು ಜಾರ್ ಗೆ ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ, ಉದ್ದಿನ ಬೇಳೆ 1/2ಚಮಚ, ಸಾಸಿವೆ 1/4ಚಮಚ, ಜೀರಿಗೆ 1 ಚಮಚ , ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಮಾಡಿಕೊಳ್ಳಿ. ನಂತರ ಕಟ್ ಮಾಡಿದ ಈರುಳ್ಳಿ 1, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸು 2 ಹಾಕಿ ಚೆನ್ನಾಗಿ ಫ್ರೈ ಮಾಡಿ ಇದಕ್ಕೆ ಬೇಯಿಸಿ ರುಬ್ಬಿದ ಮಿಶ್ರಣವನ್ನು ಹಾಕಿ , ಕೊತ್ತಂಬರಿ ಪುಡಿ , ಗರಂ ಮಸಾಲ 1 ಚಮಚ ,ಕೊತ್ತಂಬರಿ ಸೊಪ್ಪುಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

ನಿಂಬೆ ಗಾತ್ರದ ಉಂಡೆಗಳನ್ನು ಮಾಡಿ ಇಡಿ. ಹಿಟ್ಟು ಕಲೆಸಿ ಕೊಳ್ಳಲು. ಕಡಲೆ ಹಿಟ್ಟು 1 ಕಪ್, ನೀರು , ಉಪ್ಪು ರುಚಿಗೆ ತಕ್ಕಷ್ಟು ಹಾಕಿ ಹಿಟ್ಟು ಕಲೆಸಿ ಕೊಳ್ಳಿ.ಉಂಡೆಗಳನ್ನು ಹಿಟ್ಟಿಗೆ ಅದ್ದಿ , ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಹಲಸಿನ ಬೀಜ ಚನ್ನ ಬೋಂಡಾ ರೆಡಿ.
ಸಾಸ್ ಜೊತೆ ಸವಿಯಿರಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

2 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

8 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

19 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

23 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago