Advertisement
Share

ಹಲಸಿನ ಬೀಜ ಚನ್ನ ಬೋಂಡಾಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :

ಹಲಸಿನ ಬೀಜ 15, ಸಿಪ್ಪೆ ತೆಗೆದು ಜಜ್ಜಿ ಇಡಿ,  ಚನ್ನ 1/4 ಕಪ್. 3 ಗಂಟೆ ನೆನೆ ಹಾಕಿ, ಆಲೂಗಡ್ಡೆ 1 ಚಿಕ್ಕದು ಸಿಪ್ಪೆ ತೆಗೆದು ಕಟ್ ಮಾಡಿ. ಇವು 3 ನ್ನು ಕುಕ್ಕರ್ ಗೆ ಹಾಕಿ ನೀರು ಹಾಕಿ ಬೇಯಿಸಿ ಕೊಳ್ಳಿ. ತಣ್ಣಗಾದ ನಂತರ ನೀರು ತೆಗೆದು ಜಾರ್ ಗೆ ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ, ಉದ್ದಿನ ಬೇಳೆ 1/2ಚಮಚ, ಸಾಸಿವೆ 1/4ಚಮಚ, ಜೀರಿಗೆ 1 ಚಮಚ , ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಮಾಡಿಕೊಳ್ಳಿ. ನಂತರ ಕಟ್ ಮಾಡಿದ ಈರುಳ್ಳಿ 1, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸು 2 ಹಾಕಿ ಚೆನ್ನಾಗಿ ಫ್ರೈ ಮಾಡಿ ಇದಕ್ಕೆ ಬೇಯಿಸಿ ರುಬ್ಬಿದ ಮಿಶ್ರಣವನ್ನು ಹಾಕಿ , ಕೊತ್ತಂಬರಿ ಪುಡಿ , ಗರಂ ಮಸಾಲ 1 ಚಮಚ ,ಕೊತ್ತಂಬರಿ ಸೊಪ್ಪುಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

ನಿಂಬೆ ಗಾತ್ರದ ಉಂಡೆಗಳನ್ನು ಮಾಡಿ ಇಡಿ. ಹಿಟ್ಟು ಕಲೆಸಿ ಕೊಳ್ಳಲು. ಕಡಲೆ ಹಿಟ್ಟು 1 ಕಪ್, ನೀರು , ಉಪ್ಪು ರುಚಿಗೆ ತಕ್ಕಷ್ಟು ಹಾಕಿ ಹಿಟ್ಟು ಕಲೆಸಿ ಕೊಳ್ಳಿ.ಉಂಡೆಗಳನ್ನು ಹಿಟ್ಟಿಗೆ ಅದ್ದಿ , ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಹಲಸಿನ ಬೀಜ ಚನ್ನ ಬೋಂಡಾ ರೆಡಿ.
ಸಾಸ್ ಜೊತೆ ಸವಿಯಿರಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago