Advertisement
ಸುದ್ದಿಗಳು

ಹೊಸರುಚಿ | ಹಲಸಿನ ಬೀಜದ ರೊಟ್ಟಿ

Share

ಹಲಸಿನ ಬೀಜದ ರೊಟ್ಟಿ ಬೇಕಾಗುವ ಸಾಮಗ್ರಿಗಳು:  ಹಲಸಿನ ಬೀಜ 1ಕಪ್, ಅಕ್ಕಿ ಹುಡಿ 2 ಕಪ್, ಕಾಯಿ ತುರಿ 4 ಸ್ಪೂನ್, ಹಸಿಮೆಣಸು 2 ( ಬೇಕಿದ್ದರೆ ಜಾಸ್ತಿ ಹಾಕಬಹುದು). ಹಸಿ ಶುಂಠಿ (ಚಿಕ್ಕದಾಗಿ ಕಟ್ ಮಾಡಿ)1 ಸ್ಪೂನ್, ನೀರುಳ್ಳಿ 1/2 ಕಪ್, ಕರಿಬೇವಿನ ಸೊಪ್ಪು 6 ಸ್ಪೂನ್, ಅರಶಿನ ಹುಡಿ ಸ್ವಲ್ಪ, ಕೊತ್ತಂಬರಿ ಸೊಪ್ಪು 1 ಸ್ಪೂನ್,ಕೊತ್ತಂಬರಿ ಹುಡಿ. ಸ್ವಲ್ಪ ಜೀರಿಗೆ ಸ್ವಲ್ಪ 1 ಚಮಚ, ತುಪ್ಪ ಅಥವಾ ಎಣ್ಣೆ.

ಮಾಡುವ ವಿಧಾನ: ಜಜ್ಜಿದ ಹಲಸಿನ ಬೀಜವನ್ನು ಮೆತ್ತಗೆ ಬೇಯಿಸಿಕೊಳ್ಳಿ.  ನಂತರ ಕಾಯಿ ತುರಿ, ಮೆಣಸು, ಶುಂಠಿ ಹಾಕಿ ರುಬ್ಬಿಕೊಳ್ಳಿ.. ಇದಕ್ಕೆ ಅಕ್ಕಿ ಹುಡಿ, ನೀರುಳ್ಳಿ, ಕರಿಬೇವಿನ ಸೊಪ್ಪು, ಅರಶಿನ ಹುಡಿ, ಕೊತ್ತಂಬರಿ ಸೊಪ್ಪು, ಕೊತ್ತಂಬರಿ ಹುಡಿ, ಜೀರಿಗೆ, ಉಪ್ಪು ಎಲ್ಲವನ್ನೂ ಹಾಕಿ ಕಲಸಿಕೊಳ್ಳಿ. ಕಿತ್ತಳೆ ಗಾತ್ರದ ಉಂಡೆಯನ್ನು ಮಾಡಿ ಬಾಳೆಎಲೆಯ ತಳಭಾಗದಲ್ಲಿ ಕಿತ್ತಳೆ ಗಾತ್ರದ ಉಂಡೆಯನ್ನು ಹಾಕಿ ಇನ್ನೊಂದು ಎಲೆ ಇಂದ ಮುಚ್ಚಿ ಪೂರಿಯಂತೆ ಒತ್ತಿ. ಅಥವಾ ಕೈ ಯಲ್ಲಿ ತಟ್ಟ ಬಹುದು. ಕಾದ ಕಾವಲಿಯ ಮೇಲೆ ಹಾಕಿ ಬೇಯಿಸಿ ಬಾಳೆಎಲೆ ತೆಗೆದು ಎರಡು ಬದಿ ತುಪ್ಪ ಅಥವಾ ಎಣ್ಣೆ ಹಾಕಿ ಬೇಯಿಸಿಕೊಳ್ಳಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

5 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

5 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

5 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

5 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

5 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

5 hours ago