Advertisement
ಸುದ್ದಿಗಳು

ಹೊಸರುಚಿ | ಹಲಸಿನ ಬೀಜದ ರೊಟ್ಟಿ

Share

ಹಲಸಿನ ಬೀಜದ ರೊಟ್ಟಿ ಬೇಕಾಗುವ ಸಾಮಗ್ರಿಗಳು:  ಹಲಸಿನ ಬೀಜ 1ಕಪ್, ಅಕ್ಕಿ ಹುಡಿ 2 ಕಪ್, ಕಾಯಿ ತುರಿ 4 ಸ್ಪೂನ್, ಹಸಿಮೆಣಸು 2 ( ಬೇಕಿದ್ದರೆ ಜಾಸ್ತಿ ಹಾಕಬಹುದು). ಹಸಿ ಶುಂಠಿ (ಚಿಕ್ಕದಾಗಿ ಕಟ್ ಮಾಡಿ)1 ಸ್ಪೂನ್, ನೀರುಳ್ಳಿ 1/2 ಕಪ್, ಕರಿಬೇವಿನ ಸೊಪ್ಪು 6 ಸ್ಪೂನ್, ಅರಶಿನ ಹುಡಿ ಸ್ವಲ್ಪ, ಕೊತ್ತಂಬರಿ ಸೊಪ್ಪು 1 ಸ್ಪೂನ್,ಕೊತ್ತಂಬರಿ ಹುಡಿ. ಸ್ವಲ್ಪ ಜೀರಿಗೆ ಸ್ವಲ್ಪ 1 ಚಮಚ, ತುಪ್ಪ ಅಥವಾ ಎಣ್ಣೆ.

ಮಾಡುವ ವಿಧಾನ: ಜಜ್ಜಿದ ಹಲಸಿನ ಬೀಜವನ್ನು ಮೆತ್ತಗೆ ಬೇಯಿಸಿಕೊಳ್ಳಿ.  ನಂತರ ಕಾಯಿ ತುರಿ, ಮೆಣಸು, ಶುಂಠಿ ಹಾಕಿ ರುಬ್ಬಿಕೊಳ್ಳಿ.. ಇದಕ್ಕೆ ಅಕ್ಕಿ ಹುಡಿ, ನೀರುಳ್ಳಿ, ಕರಿಬೇವಿನ ಸೊಪ್ಪು, ಅರಶಿನ ಹುಡಿ, ಕೊತ್ತಂಬರಿ ಸೊಪ್ಪು, ಕೊತ್ತಂಬರಿ ಹುಡಿ, ಜೀರಿಗೆ, ಉಪ್ಪು ಎಲ್ಲವನ್ನೂ ಹಾಕಿ ಕಲಸಿಕೊಳ್ಳಿ. ಕಿತ್ತಳೆ ಗಾತ್ರದ ಉಂಡೆಯನ್ನು ಮಾಡಿ ಬಾಳೆಎಲೆಯ ತಳಭಾಗದಲ್ಲಿ ಕಿತ್ತಳೆ ಗಾತ್ರದ ಉಂಡೆಯನ್ನು ಹಾಕಿ ಇನ್ನೊಂದು ಎಲೆ ಇಂದ ಮುಚ್ಚಿ ಪೂರಿಯಂತೆ ಒತ್ತಿ. ಅಥವಾ ಕೈ ಯಲ್ಲಿ ತಟ್ಟ ಬಹುದು. ಕಾದ ಕಾವಲಿಯ ಮೇಲೆ ಹಾಕಿ ಬೇಯಿಸಿ ಬಾಳೆಎಲೆ ತೆಗೆದು ಎರಡು ಬದಿ ತುಪ್ಪ ಅಥವಾ ಎಣ್ಣೆ ಹಾಕಿ ಬೇಯಿಸಿಕೊಳ್ಳಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

5 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

9 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago