Advertisement
ಅನುಕ್ರಮ

ಹಲಸಿನ ಕಾಯಿ ತಂಬುಳಿ – ಊಟಕ್ಕೆ ತಂಪು ನೀಡುವ ಸಾಂಪ್ರದಾಯಿಕ ಸವಿರುಚಿ

Share

ಹಲಸಿನ ಹಣ್ಣಿನ ಸೀಸನ್‌ನಲ್ಲಿ ಹಲಸಿನ ಕಾಯಿಯಿಂದ ವಿವಿಧ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಅವುಗಳಲ್ಲಿ ಆರೋಗ್ಯಕರ ಹಾಗೂ ರುಚಿಕರವಾದ ಒಂದು ವಿಶೇಷ ಖಾದ್ಯವೇ ಹಲಸಿನ ಕಾಯಿ ತಂಬುಳಿ. ಮಜ್ಜಿಗೆ, ತೆಂಗಿನ ತುರಿ ಹಾಗೂ ಜೀರಿಗೆ ಸುವಾಸನೆಯೊಂದಿಗೆ ತಯಾರಾಗುವ ಈ ತಂಬುಳಿ ಬೇಸಿಗೆಯ ದಿನಗಳಲ್ಲಿ ದೇಹಕ್ಕೆ ತಂಪು ನೀಡುವುದರ ಜೊತೆಗೆ ಊಟದ ರುಚಿಯನ್ನು ಹೆಚ್ಚಿಸುತ್ತದೆ.

ಬೇಕಾಗುವ ಪದಾರ್ಥಗಳು :

  • ಬಲಿತ ಹಲಸಿನ ಕಾಯಿ – 6 ಎಸಳು (ಬೇಯಿಸಿಕೊಂಡದ್ದು)
  • ಜೀರಿಗೆ – 1 ಚಮಚ
  • ಕಾಯಿತುರಿ – ¼ ಕಪ್
  • ಹಸಿಮೆಣಸಿನ ಕಾಯಿ – 1
  • ಹಿಂಗು – ಸ್ವಲ್ಪ
  • ಮಜ್ಜಿಗೆ – 1 ಲೋಟ
  • ಉಪ್ಪು – ರುಚಿಗೆ ತಕ್ಕಷ್ಟು

ಒಗ್ಗರಣೆಗೆ

  • ಸಾಸಿವೆ , ಕರಿಬೇವಿನ ಸೊಪ್ಪು , ತುಪ್ಪ, ಹಿಂಗು, ಒಣ ಕೆಂಪು ಮೆಣಸು

ಮಾಡುವ ವಿಧಾನ

  1. ಹಲಸಿನ ಕಾಯಿಯನ್ನು ಚೆನ್ನಾಗಿ ಬೇಯಿಸಿಕೊಳ್ಳಿ.
  2. ಮಿಕ್ಸಿ ಜಾರ್‌ಗೆ ಕಾಯಿತುರಿ, ಜೀರಿಗೆ, ಹಸಿಮೆಣಸಿನ ಕಾಯಿ, ಬೇಯಿಸಿದ ಹಲಸಿನ ಕಾಯಿ, ಉಪ್ಪು ಹಾಗೂ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.
  3. ರುಬ್ಬಿದ ಮಿಶ್ರಣವನ್ನು ಒಂದು ಪಾತ್ರೆಗೆ ಹಾಕಿ.
  4. ಇದಕ್ಕೆ ಮಜ್ಜಿಗೆ ಹಾಗೂ ಅಗತ್ಯವಿದ್ದಷ್ಟು ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
  5. ಸಣ್ಣ ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಸಾಸಿವೆ, ಕರಿಬೇವು, ಹಿಂಗು ಹಾಗೂ ಒಣ ಕೆಂಪು ಮೆಣಸು ಹಾಕಿ ಒಗ್ಗರಣೆ ತಯಾರಿಸಿ.
  6. ಈ ಒಗ್ಗರಣೆಯನ್ನು ತಂಬುಳಿಗೆ ಸೇರಿಸಿ ಕಲಸಿ.

ವಿಶೇಷತೆ :  ಹಲಸಿನ ಕಾಯಿ ತಂಬುಳಿ ಅನ್ನದ ಜೊತೆ ಅತ್ಯಂತ ರುಚಿಕರವಾಗಿದ್ದು, ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಆರೋಗ್ಯಕರ ಖಾದ್ಯವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit Thambuli is a traditional Karnataka dish prepared using boiled jackfruit, coconut, cumin, and buttermilk. It is a refreshing and healthy side dish that pairs well with rice, especially during summe

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…

1 hour ago

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

2 hours ago

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…

2 hours ago

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

2 hours ago

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

5 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

18 hours ago