Advertisement
ಅನುಕ್ರಮ

ಹಲಸಿನ ಕಾಯಿ ತಂಬುಳಿ – ಊಟಕ್ಕೆ ತಂಪು ನೀಡುವ ಸಾಂಪ್ರದಾಯಿಕ ಸವಿರುಚಿ

Share

ಹಲಸಿನ ಹಣ್ಣಿನ ಸೀಸನ್‌ನಲ್ಲಿ ಹಲಸಿನ ಕಾಯಿಯಿಂದ ವಿವಿಧ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಅವುಗಳಲ್ಲಿ ಆರೋಗ್ಯಕರ ಹಾಗೂ ರುಚಿಕರವಾದ ಒಂದು ವಿಶೇಷ ಖಾದ್ಯವೇ ಹಲಸಿನ ಕಾಯಿ ತಂಬುಳಿ. ಮಜ್ಜಿಗೆ, ತೆಂಗಿನ ತುರಿ ಹಾಗೂ ಜೀರಿಗೆ ಸುವಾಸನೆಯೊಂದಿಗೆ ತಯಾರಾಗುವ ಈ ತಂಬುಳಿ ಬೇಸಿಗೆಯ ದಿನಗಳಲ್ಲಿ ದೇಹಕ್ಕೆ ತಂಪು ನೀಡುವುದರ ಜೊತೆಗೆ ಊಟದ ರುಚಿಯನ್ನು ಹೆಚ್ಚಿಸುತ್ತದೆ.

ಬೇಕಾಗುವ ಪದಾರ್ಥಗಳು :

  • ಬಲಿತ ಹಲಸಿನ ಕಾಯಿ – 6 ಎಸಳು (ಬೇಯಿಸಿಕೊಂಡದ್ದು)
  • ಜೀರಿಗೆ – 1 ಚಮಚ
  • ಕಾಯಿತುರಿ – ¼ ಕಪ್
  • ಹಸಿಮೆಣಸಿನ ಕಾಯಿ – 1
  • ಹಿಂಗು – ಸ್ವಲ್ಪ
  • ಮಜ್ಜಿಗೆ – 1 ಲೋಟ
  • ಉಪ್ಪು – ರುಚಿಗೆ ತಕ್ಕಷ್ಟು

ಒಗ್ಗರಣೆಗೆ

  • ಸಾಸಿವೆ , ಕರಿಬೇವಿನ ಸೊಪ್ಪು , ತುಪ್ಪ, ಹಿಂಗು, ಒಣ ಕೆಂಪು ಮೆಣಸು

ಮಾಡುವ ವಿಧಾನ

  1. ಹಲಸಿನ ಕಾಯಿಯನ್ನು ಚೆನ್ನಾಗಿ ಬೇಯಿಸಿಕೊಳ್ಳಿ.
  2. ಮಿಕ್ಸಿ ಜಾರ್‌ಗೆ ಕಾಯಿತುರಿ, ಜೀರಿಗೆ, ಹಸಿಮೆಣಸಿನ ಕಾಯಿ, ಬೇಯಿಸಿದ ಹಲಸಿನ ಕಾಯಿ, ಉಪ್ಪು ಹಾಗೂ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.
  3. ರುಬ್ಬಿದ ಮಿಶ್ರಣವನ್ನು ಒಂದು ಪಾತ್ರೆಗೆ ಹಾಕಿ.
  4. ಇದಕ್ಕೆ ಮಜ್ಜಿಗೆ ಹಾಗೂ ಅಗತ್ಯವಿದ್ದಷ್ಟು ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
  5. ಸಣ್ಣ ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಸಾಸಿವೆ, ಕರಿಬೇವು, ಹಿಂಗು ಹಾಗೂ ಒಣ ಕೆಂಪು ಮೆಣಸು ಹಾಕಿ ಒಗ್ಗರಣೆ ತಯಾರಿಸಿ.
  6. ಈ ಒಗ್ಗರಣೆಯನ್ನು ತಂಬುಳಿಗೆ ಸೇರಿಸಿ ಕಲಸಿ.

ವಿಶೇಷತೆ :  ಹಲಸಿನ ಕಾಯಿ ತಂಬುಳಿ ಅನ್ನದ ಜೊತೆ ಅತ್ಯಂತ ರುಚಿಕರವಾಗಿದ್ದು, ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಆರೋಗ್ಯಕರ ಖಾದ್ಯವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Jackfruit Thambuli is a traditional Karnataka dish prepared using boiled jackfruit, coconut, cumin, and buttermilk. It is a refreshing and healthy side dish that pairs well with rice, especially during summe

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

1 hour ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

13 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

13 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

13 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

13 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

1 day ago