ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |

July 15, 2025
8:01 AM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಲಾಯಿತು. ಬಿಜೆಪಿ ಹಿರಿಯ ನಾಯಕ ಎ ಎಲ್‌ ಹೆಕ್‌ ಅವರು ಸಚಿವರಿಗೆ ಉಡುಗೊರೆ ನೀಡಿ ಮೇಘಾಲಯ ಸರ್ಕಾರವು ‘ಮಿಷನ್ ಜಾಕ್‌ ಫ್ರುಟ್’ ಅಡಿಯಲ್ಲಿ ಹಲಸಿನ ಕೃಷಿ ಮತ್ತು ಸಂಸ್ಕರಣೆಯನ್ನು ಉತ್ತೇಜಿಸುವ ವಿವರಗಳನ್ನು ತಿಳಿಸಿದರು.

Advertisement

ಮೇಘಾಲಯಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಖಾಸಗಿ ರೆಸಾರ್ಟ್‌ನಲ್ಲಿ ಮೇಘಾಲಯದ ರೈತರು  ಬೆಳೆಸಲಾದ ಹಲಸಿನ ಹಣ್ಣನ್ನು ಕೃಷಿಕರ ಪರವಾಗಿ ಆತಿಥ್ಯದ ಸಂಕೇತವಾಗಿ ಮತ್ತು ರಾಜ್ಯದ ಶ್ರೀಮಂತ ಕೃಷಿ ಉತ್ಪನ್ನಗಳ ಸಂಕೇತವಾಗಿ ಎ.ಎಲ್. ಹೆಕ್ ಅವರು ಉಡುಗೊರೆಯಾಗಿ ನೀಡಿದರು.  ಇದೇ ಸಂದರ್ಭ, ಹಲಸಿನ ಕೃಷಿ ಮತ್ತು ಸಂಸ್ಕರಣೆಯನ್ನು ಉತ್ತೇಜಿಸುವ ಮೇಘಾಲಯ ಸರ್ಕಾರ ಯೋಜನೆಯನ್ನು ತಿಳಿಸಿದರು.  ಹಲಸು ಹಣ್ಣಿನ ವಾಣಿಜ್ಯ ಸಾಮರ್ಥ್ಯವನ್ನು ಬಳಸಿಕೊಳ್ಳುವ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ʼಮಿಷನ್ ಜಾಕ್‌ ಫ್ರುಟ್’  ಹೊಂದಿದೆ ಎಂದು ಹೆಕ್‌ ಅವರು ಹೇಳಿದರು. ಹಣಕಾಸು ಸಚಿವರು ಈ  ಕಾರ್ಯಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಉತ್ಪನ್ನಗಳ ಗುಣಮಟ್ಟವನ್ನು ಶ್ಲಾಘಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror