ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೂ ಶುದ್ಧ ಮತ್ತು ಸುಸ್ಥಿರ ಕುಡಿಯುವ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಜಲಜೀವನ್ ಮಿಷನ್ ಅಡಿಯಲ್ಲಿ ದೇಶಾದ್ಯಂತ 16 ಕೋಟಿಗೂ ಅಧಿಕ ಮನೆಗಳಿಗೆ ಕೊಳವೆ ಮೂಲಕ ನೀರು ಪೂರೈಕೆ ಮಾಡಲಾಗಿದ್ದು, ಇದರಿಂದ ಶೇಕಡಾ 80ರಷ್ಟು ಗ್ರಾಮೀಣ ಕುಟುಂಬಗಳು ಕೊಳವೆ ನೀರು ಸಂಪರ್ಕ ಪಡೆದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಮನೆಗಳಿಗೆ ಕೊಳವೆ ನೀರು ಪೂರೈಕೆಯಿಂದ ₹8.40 ಲಕ್ಷ ಕೋಟಿ ಉಳಿತಾಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ತಿಳಿಸಿದೆ ಎಂದು ಅವರು ಹೇಳಿದರು. ಈ ಯೋಜನೆಯಡಿ ನೀರಿನ ಗುಣಮಟ್ಟ ಪರೀಕ್ಷೆಗಾಗಿ 25 ಲಕ್ಷ ಮಹಿಳೆಯರಿಗೆ ತರಬೇತಿ ನೀಡಲಾಗಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

