ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

February 12, 2026
6:47 AM

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಪ್ರಗತಿ ಪರಿಶೀಲನೆ ವೇಳೆ ಅವರು ಈ ನಿರ್ದೇಶನ ನೀಡಿದ್ದಾರೆ.

ಒಟ್ಟು 650 ಕಾಮಗಾರಿಗಳು ಪೂರ್ಣಗೊಂಡಿದ್ದು ಇದಕ್ಕಾಗಿ ಸುಮಾರು ₹482 ಕೋಟಿ ವೆಚ್ಚ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಕಾಮಗಾರಿಗಳಲ್ಲಿ ಶೇಕಡಾ 84% ಮಾತ್ರ ಪೂರ್ಣಗೊಂಡಿದ್ದು ಉಳಿದ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಹರ್‌ ಘರ್‌ ಜಲ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರು ಸಂಪರ್ಕ ನೀಡಿದ ಬಳಿಕ, ಆ ಕಾರ್ಯವನ್ನು ಸಂಬಂಧಿತ ಗ್ರಾಮಸಭೆಗಳಲ್ಲಿ ದೃಢೀಕರಿಸಬೇಕು ಎಂದು ಸಮೀರ್ ಶುಕ್ಲಾ ಸೂಚಿಸಿದ್ದಾರೆ. ಯೋಜನೆ ಕಾಗದದಲ್ಲಿ ಮಾತ್ರವಲ್ಲ, ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂಬ  ಸಂದೇಶ ನೀಡಿದ್ದಾರೆ.

ಕಾಮಗಾರಿಗಳ ಗುಣಮಟ್ಟ ಕಾಪಾಡುವುದು, ಸಮಯಮಿತಿಯಲ್ಲಿ ಪೂರ್ಣಗೊಳಿಸುವುದು ಮತ್ತು ಗ್ರಾಮೀಣ ಜನರಿಗೆ ನಿರಂತರ ಕುಡಿಯುವ ನೀರು ಪೂರೈಕೆ ಖಚಿತಪಡಿಸುವುದು ಮುಖ್ಯ ಉದ್ದೇಶವಾಗಿದೆ. ಜಲಜೀವನ್ ಮಿಷನ್ ಗ್ರಾಮೀಣ ಆರೋಗ್ಯ, ಸ್ವಚ್ಛತೆ ಮತ್ತು ಜೀವನಮಟ್ಟ ಸುಧಾರಣೆಗೆ ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ, ಯೋಜನೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror