Advertisement
ಸುದ್ದಿಗಳು

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

Share

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಪ್ರಗತಿ ಪರಿಶೀಲನೆ ವೇಳೆ ಅವರು ಈ ನಿರ್ದೇಶನ ನೀಡಿದ್ದಾರೆ.

ಒಟ್ಟು 650 ಕಾಮಗಾರಿಗಳು ಪೂರ್ಣಗೊಂಡಿದ್ದು ಇದಕ್ಕಾಗಿ ಸುಮಾರು ₹482 ಕೋಟಿ ವೆಚ್ಚ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಕಾಮಗಾರಿಗಳಲ್ಲಿ ಶೇಕಡಾ 84% ಮಾತ್ರ ಪೂರ್ಣಗೊಂಡಿದ್ದು ಉಳಿದ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಹರ್‌ ಘರ್‌ ಜಲ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರು ಸಂಪರ್ಕ ನೀಡಿದ ಬಳಿಕ, ಆ ಕಾರ್ಯವನ್ನು ಸಂಬಂಧಿತ ಗ್ರಾಮಸಭೆಗಳಲ್ಲಿ ದೃಢೀಕರಿಸಬೇಕು ಎಂದು ಸಮೀರ್ ಶುಕ್ಲಾ ಸೂಚಿಸಿದ್ದಾರೆ. ಯೋಜನೆ ಕಾಗದದಲ್ಲಿ ಮಾತ್ರವಲ್ಲ, ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂಬ  ಸಂದೇಶ ನೀಡಿದ್ದಾರೆ.

ಕಾಮಗಾರಿಗಳ ಗುಣಮಟ್ಟ ಕಾಪಾಡುವುದು, ಸಮಯಮಿತಿಯಲ್ಲಿ ಪೂರ್ಣಗೊಳಿಸುವುದು ಮತ್ತು ಗ್ರಾಮೀಣ ಜನರಿಗೆ ನಿರಂತರ ಕುಡಿಯುವ ನೀರು ಪೂರೈಕೆ ಖಚಿತಪಡಿಸುವುದು ಮುಖ್ಯ ಉದ್ದೇಶವಾಗಿದೆ. ಜಲಜೀವನ್ ಮಿಷನ್ ಗ್ರಾಮೀಣ ಆರೋಗ್ಯ, ಸ್ವಚ್ಛತೆ ಮತ್ತು ಜೀವನಮಟ್ಟ ಸುಧಾರಣೆಗೆ ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ, ಯೋಜನೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

12 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

19 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago