Advertisement
ಸುದ್ದಿಗಳು

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

Share

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಪ್ರಗತಿ ಪರಿಶೀಲನೆ ವೇಳೆ ಅವರು ಈ ನಿರ್ದೇಶನ ನೀಡಿದ್ದಾರೆ.

ಒಟ್ಟು 650 ಕಾಮಗಾರಿಗಳು ಪೂರ್ಣಗೊಂಡಿದ್ದು ಇದಕ್ಕಾಗಿ ಸುಮಾರು ₹482 ಕೋಟಿ ವೆಚ್ಚ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಕಾಮಗಾರಿಗಳಲ್ಲಿ ಶೇಕಡಾ 84% ಮಾತ್ರ ಪೂರ್ಣಗೊಂಡಿದ್ದು ಉಳಿದ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

Advertisement

ಹರ್‌ ಘರ್‌ ಜಲ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರು ಸಂಪರ್ಕ ನೀಡಿದ ಬಳಿಕ, ಆ ಕಾರ್ಯವನ್ನು ಸಂಬಂಧಿತ ಗ್ರಾಮಸಭೆಗಳಲ್ಲಿ ದೃಢೀಕರಿಸಬೇಕು ಎಂದು ಸಮೀರ್ ಶುಕ್ಲಾ ಸೂಚಿಸಿದ್ದಾರೆ. ಯೋಜನೆ ಕಾಗದದಲ್ಲಿ ಮಾತ್ರವಲ್ಲ, ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂಬ  ಸಂದೇಶ ನೀಡಿದ್ದಾರೆ.

ಕಾಮಗಾರಿಗಳ ಗುಣಮಟ್ಟ ಕಾಪಾಡುವುದು, ಸಮಯಮಿತಿಯಲ್ಲಿ ಪೂರ್ಣಗೊಳಿಸುವುದು ಮತ್ತು ಗ್ರಾಮೀಣ ಜನರಿಗೆ ನಿರಂತರ ಕುಡಿಯುವ ನೀರು ಪೂರೈಕೆ ಖಚಿತಪಡಿಸುವುದು ಮುಖ್ಯ ಉದ್ದೇಶವಾಗಿದೆ. ಜಲಜೀವನ್ ಮಿಷನ್ ಗ್ರಾಮೀಣ ಆರೋಗ್ಯ, ಸ್ವಚ್ಛತೆ ಮತ್ತು ಜೀವನಮಟ್ಟ ಸುಧಾರಣೆಗೆ ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ, ಯೋಜನೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

29 minutes ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

52 minutes ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

8 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

10 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

11 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

11 hours ago