ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ

February 11, 2025
6:47 AM
ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ. 

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಪ್ಪನಹಾಳದಲ್ಲಿ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ. ವಾರದ 7 ದಿನವೂ ನೀರು ಪೂರೈಕೆ ಆಗುತ್ತಿರುವ ತಾಲೂಕಿನ ಮೊದಲ ಗ್ರಾಮ ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆ ತುಂಬಿಸುವ ಮತ್ತು  ಕುಷ್ಟಗಿ,  ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮೂಲಕ ಅನುಷ್ಠಾನ ಮಾಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ  ದೂರ ಸಾಗಬೇಕಾಗಿದ್ದ ಜನರಿಗೆ ಮನೆ ಮುಂದೆಯೇ ನಲ್ಲಿಯ ಮೂಲಕ ನೀರು ಲಭ್ಯವಾಗುತ್ತಿದೆ. ‌ಜಲಜೀವನ್ ಮಿಷನ್ ಯೋಜನೆ ಜಾರಿಯಿಂದಾಗಿ ಕೊಪ್ಪಳ ಜಿಲ್ಲೆಯ ತಿಪ್ಪನಹಾಳ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿರುವುದು ಗ್ರಾಮದ ಜನರ ಹರ್ಷಕ್ಕೆ ಕಾರಣವಾಗಿದೆ.

ಈ ಮುಂಚೆ ನೀರಿಗಾಗಿ ಬಹಳ ದೂರ ಹೋಗಬೇಕಾಗಿತ್ತು. ಇದೀಗ ನಲ್ಲಿಯ ಮೂಲಕ ಮನೆಯ ಮುಂದೆಯೇ ನೀರು ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಅನುಕೂಲವಾಗಿದೆ ಎಂದು ಗ್ರಾಮಸ್ಥರಾದ ಶಾಂತಾ ಹೇಳುತ್ತಾರೆ. ಮನೆಯಿಂದ ಶಾಲೆಗೆ ಬಾಟಲಿಯಲ್ಲಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜಲಜೀವನ್ ಮಿಷನ್ ಅನುಷ್ಠಾನದಿಂದಾಗಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಇಲ್ಲಿನ ಬಹುದಿನಗಳ ಸಮಸ್ಯೆ ಬಗೆಹರಿದಿದೆ ಎಂದು  ಶಿಕ್ಷಕಿ ನಾಗರತ್ನ ಹೇಳುತ್ತಾರೆ. ದಿನದ 24 ಗಂಟೆ ಹಾಗೂ ವಾರದ 7 ದಿನಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ ಬಂಗಾರಿ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror